ಬಿರುಗಾಳಿಯಿಂದಾಗಿ ಹಲವು ಕಡೆಗಳಲ್ಲಿ ಮರಗಳ ಕೊಂಬೆಗಳು ಬಾಗಿದ್ದವು. ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಜನ ಮಳೆಯಿಂದ ಸ್ವಲ್ಪ ನಿಟ್ಟುಸಿರು ಬಿಟ್ಟರು.
ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಕಮಲಾಪುರ, ಹಂಪಿ, ಬೈಲುವದ್ದಿಗೇರಿ, ಧರ್ಮಸಾಗರ, ಕಾಕುಬಾಳು ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.