ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ವಟ್ಟಮ್ಮನಹಳ್ಳಿಯಲ್ಲಿ ರೈತ ಜಾತಪ್ಪ ಅವರ ಗದ್ದೆಯಲ್ಲಿನ ಕೃಷಿ ಹೊಂಡ ಒಡೆದಿದ್ದರಿಂದ ಮೂರುವರೆ ಎಕರೆಯಲ್ಲಿ ಬೆಳೆದು ನಿಂತಿದ್ದ ಪಪ್ಪಾಯಿ, ದಾಳಿಂಬೆ ಸಂಪೂರ್ಣ ನಾಶವಾಗಿದೆ. ಇನ್ನು, ಸಕ್ರಹಳ್ಳಿಯಲ್ಲಿ 9.5 ಎಕರೆ ಮೆಕ್ಕೆಜೋಳ, 1.5 ಎಕರೆ ಕಬ್ಬು ಬೆಳೆ ಹಾನಿಯಾಗಿದೆ. ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿಯ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.