ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕಿನಾದ್ಯಂತ ಬಿರುಸಿನ ಮಳೆ

Last Updated 3 ಜುಲೈ 2019, 13:06 IST
ಅಕ್ಷರ ಗಾತ್ರ

ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಮಧ್ಯಾಹ್ನ ಬಿರುಸಿನ ಮಳೆಯಾಯಿತು.

ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಆವರಿಸಿಕೊಂಡಿತ್ತು. ಮಧ್ಯಾಹ್ನ ಏಕಾಏಕಿ ಬಿರುಸಿನ ಮಳೆ ಸುರಿಯಿತು. ಜೋರಾಗಿ ಮಳೆ ಸುರಿದ ಕಾರಣ ದೈನಂದಿನ ಕೆಲಸಕ್ಕೆ ಹೋಗುವವರು ರಸ್ತೆಬದಿಯ ಮಳಿಗೆಗಳಲ್ಲಿ ಕಾದು ನಿಲ್ಲಬೇಕಾಯಿತು. ಕೆಲಸಮಯ ವಾಹನ ಹಾಗೂ ಜನ ಸಂಚಾರ ನಿಂತು ಹೋಗಿತ್ತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ವ್ಯಾಸನಕೆರೆ, ಸಂಕ್ಲಾಪುರ, ವಡ್ಡರಹಳ್ಳಿ, ಸೀತಾರಾಮ ತಾಂಡಾ, ಕೊಂಡನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT