ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಪೆರೆದ ಸಂಜೆ ಮಳೆ

Last Updated 10 ಮೇ 2021, 13:55 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಹಲವೆಡೆ ಸೋಮವಾರ ಸಂಜೆ ಸುರಿದ ಮಳೆ ತಂಪೆರೆಯಿತು.

ಬೆಳಿಗ್ಗೆಯಿಂದ ವಿಪರೀತ ಬಿಸಿಲು, ಸೆಕೆ ಇತ್ತು. ಸಂಜೆ ಏಕಾಏಕಿ ಕಾರ್ಮೋಡ ಕವಿದು, ಕೆಲಕಾಲ ಮಳೆಯಾಗಿದ್ದರಿಂದ ವಾತಾವರಣ ತಂಪಾಯಿತು.

ಕೋವಿಡ್‌ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪೊಲೀಸರು ಬಿಟ್ಟರೆ ಯಾರೊಬ್ಬರೂ ರಸ್ತೆಗಳಲ್ಲಿ ಇರಲಿಲ್ಲ. ಸಂಜೆ ಸುರಿದ ಮಳೆಗೆ ಅವರು ಕೂಡ ಕಟ್ಟಡಗಳ ಅಡಿ ಆಶ್ರಯ ಪಡೆದುಕೊಂಡಿದ್ದರಿಂದ ಪ್ರಮುಖ ರಸ್ತೆಗಳೆಲ್ಲ ಜನರಿಲ್ಲದೇ ಬಿಕೋ ಎನ್ನುತ್ತಿದ್ದವು.

ತಾಲ್ಲೂಕಿನ ಹಂಪಿ, ಕಮಲಾಪುರ, ಕಡ್ಡಿರಾಂಪುರ, ಧರ್ಮದಗುಡ್ಡ, ಕಾಳಘಟ್ಟ, ಬಸವನದುರ್ಗ, ನಾಗೇನಹಳ್ಳಿ, ಹೊಸೂರು ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT