ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್ 'ಸಂಸದರ ಕಚೇರಿ' ಉದ್ಘಾಟನೆ

Last Updated 4 ಜನವರಿ 2021, 7:54 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್ ಅವರ ಕಚೇರಿಯನ್ನು ನಗರದ ಬುಡಾ ಕಚೇರಿ ಆವರಣದಲ್ಲಿರುವ ಬುಡಾ ಕಾಂಪ್ಲೆಕ್ಸ್‌ನಲ್ಲಿ ಸೋಮವಾರ ಉದ್ಘಾಟಿಸಲಾಯಿತು.

ನಿಯಮಿತವಾಗಿ ಸಂಸದರು ಇನ್ನು ಮುಂದೆ ಸಾರ್ವಜನಿಕರ‌ ಅಹವಾಲು ಆಲಿಸಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗೆ ಕಳುಹಿಸಿ ಕ್ರಮಕೈಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಜನರ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳಿಗೆ ಪರಿಹಾರ ಒದಗಿಸಲು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲು ಕಚೇರಿಯನ್ನು ಆರಂಭಿಸಲಾಗಿದೆ. ಸಂಸದರ ಅನುದಾನದಲ್ಲಿ ಅತಿಹೆಚ್ಚನ್ನು ನನ್ನ ಸ್ವಂತ ಜಿಲ್ಲೆಗೆ ವ್ಯಯಿಸಲಾಗುವುದು. ಲೋಕಸಭಾ ಸದಸ್ಯರಿಗೆ ಕಚೇರಿ ಶಾಶ್ವತವಾಗಿರುತ್ತದೆ. ರಾಜ್ಯಸಭಾ ಸದಸ್ಯರಿಗೆ ಇರುವುದಿಲ್ಲ. ಆದರೆ ನನ್ನ ಕೋರಿಕೆಗೆ ಸರಕಾರ ಸ್ಪಂದಿಸಿ ಕಚೇರಿ ಆರಂಭಿಸಲು ಒಪ್ಪಿಗೆ ನೀಡಿದ್ದು,ಇಂದು ಕಾರ್ಯಾರಂಭ ಮಾಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT