<p><strong>ಹೊಸಪೇಟೆ:</strong> ‘ಯಾವುದೇ ವಿಷಯವಿರಲಿ ಅದನ್ನು ಒಂದು ದೃಷ್ಟಿಕೋನದಿಂದ ನೋಡದೆ ಹಲವು ಆಯಾಮಗಳಲ್ಲಿ ನೋಡಿ ಅದನ್ನು ವಿಶ್ಲೇಷಿಸುವ ಜಾಣ್ಮೆ, ವಿಶಿಷ್ಟ ವ್ಯಕ್ತಿತ್ವ ಡಾ.ಎ.ಕೆ. ರಾಮಾನುಜನ್ ಅವರದಾಗಿತ್ತು’ ಎಂದು ಡಾ.ಅಮರಕುಮಾರ್ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ‘ಡಾ.ಎ.ಕೆ.ರಾಮಾನುಜನ್ ಅವರ ವ್ಯಕ್ತಿತ್ವ ಮತ್ತು ಚಿಂತನೆ’ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಯಾವುದೇ ವಿಷಯವಿರಲಿ ಅದನ್ನು ತರ್ಕಬದ್ಧವಾಗಿ ಚಿಂತಿಸುವ ಮನೋಭಾವ ಅವರಲ್ಲಿತ್ತು’ ಎಂದರು.</p>.<p>‘ಒಬ್ಬ ವ್ಯಕ್ತಿ ಪರಿಪೂರ್ಣವಾಗಬೇಕಾದರೆ ಸಾಹಿತ್ಯ, ಇತಿಹಾಸ, ಚರಿತ್ರೆ ಹಾಗೂ ಸಂಗೀತ ಇತರೆ ವಿಚಾರಗಳನ್ನು ಅಧ್ಯಯನ ಮಾಡಿ ಅವುಗಳನ್ನು ಬೇರೆ ಬೇರೆ ಆಯಾಮಗಳಿಂದ ಆಲೋಚಿಸುವ ಮೂಲಕ ಉತ್ತಮ ವ್ಯಕ್ತಿಯಾಗಲು ಸಾಧ್ಯ’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ವೆಂಕಟಗಿರಿ ದಳವಾಯಿ, ‘ಭಾರತದ ಚಿಂತನೆಗಳನ್ನು ಅಪಾರವಾಗಿ ಪ್ರೀತಿಸಿದ ಡಾ.ಎ.ಕೆ.ರಾಮಾನುಜನ್ ಅವರು ನಮ್ಮ ಕಾಲಕ್ಕೆ ಒಂದು ಮಾದರಿಯಾಗಿದ್ದಾರೆ’ ಎಂದರು.</p>.<p>ಪ್ರಾಧ್ಯಾಪಕರಾದ ರಹಮತ್ ತರೀಕೆರೆ, ಅಮರೇಶ ನುಗಡೋಣಿ, ಮಲ್ಲಿಕಾರ್ಜುನ ವಣೇನೂರು, ಯರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಯಾವುದೇ ವಿಷಯವಿರಲಿ ಅದನ್ನು ಒಂದು ದೃಷ್ಟಿಕೋನದಿಂದ ನೋಡದೆ ಹಲವು ಆಯಾಮಗಳಲ್ಲಿ ನೋಡಿ ಅದನ್ನು ವಿಶ್ಲೇಷಿಸುವ ಜಾಣ್ಮೆ, ವಿಶಿಷ್ಟ ವ್ಯಕ್ತಿತ್ವ ಡಾ.ಎ.ಕೆ. ರಾಮಾನುಜನ್ ಅವರದಾಗಿತ್ತು’ ಎಂದು ಡಾ.ಅಮರಕುಮಾರ್ ತಿಳಿಸಿದರು.</p>.<p>ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ‘ಡಾ.ಎ.ಕೆ.ರಾಮಾನುಜನ್ ಅವರ ವ್ಯಕ್ತಿತ್ವ ಮತ್ತು ಚಿಂತನೆ’ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಯಾವುದೇ ವಿಷಯವಿರಲಿ ಅದನ್ನು ತರ್ಕಬದ್ಧವಾಗಿ ಚಿಂತಿಸುವ ಮನೋಭಾವ ಅವರಲ್ಲಿತ್ತು’ ಎಂದರು.</p>.<p>‘ಒಬ್ಬ ವ್ಯಕ್ತಿ ಪರಿಪೂರ್ಣವಾಗಬೇಕಾದರೆ ಸಾಹಿತ್ಯ, ಇತಿಹಾಸ, ಚರಿತ್ರೆ ಹಾಗೂ ಸಂಗೀತ ಇತರೆ ವಿಚಾರಗಳನ್ನು ಅಧ್ಯಯನ ಮಾಡಿ ಅವುಗಳನ್ನು ಬೇರೆ ಬೇರೆ ಆಯಾಮಗಳಿಂದ ಆಲೋಚಿಸುವ ಮೂಲಕ ಉತ್ತಮ ವ್ಯಕ್ತಿಯಾಗಲು ಸಾಧ್ಯ’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ವೆಂಕಟಗಿರಿ ದಳವಾಯಿ, ‘ಭಾರತದ ಚಿಂತನೆಗಳನ್ನು ಅಪಾರವಾಗಿ ಪ್ರೀತಿಸಿದ ಡಾ.ಎ.ಕೆ.ರಾಮಾನುಜನ್ ಅವರು ನಮ್ಮ ಕಾಲಕ್ಕೆ ಒಂದು ಮಾದರಿಯಾಗಿದ್ದಾರೆ’ ಎಂದರು.</p>.<p>ಪ್ರಾಧ್ಯಾಪಕರಾದ ರಹಮತ್ ತರೀಕೆರೆ, ಅಮರೇಶ ನುಗಡೋಣಿ, ಮಲ್ಲಿಕಾರ್ಜುನ ವಣೇನೂರು, ಯರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>