<p><strong>ಹೊಸಪೇಟೆ (ವಿಜಯನಗರ):</strong> ಚಿತ್ತವಾಡ್ಗಿ ಠಾಣೆಯ ಎಎಸ್ಐ ಎಂ. ಶಬ್ಬೀರ್ ಹುಸೇನ್ ಅವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ, ಶುಕ್ರವಾರ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.</p>.<p>ನಗರದ ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಳಿಕ ಮನವಿ ಪತ್ರ ಸಲ್ಲಿಸಿದರು.</p>.<p>ಜೂ. 26ರಂದು ಸಂಜೆ 5.55ರ ಸುಮಾರಿಗೆ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ.ಯ. ಗಣೇಶ ಬೈಕ್ ಮೇಲೆ ತೆರಳುತ್ತಿದ್ದಾಗ ಅವರನ್ನು ತಡೆದ ಶಬ್ಬೀರ್ ಅವರು, ಸರ್ಕಾರಕ್ಕೆ ₹100, ನನಗೆ ₹100 ಎಂದು ಲಂಚ ಪಡೆದಿದ್ದಾರೆ. ಹಣ ಕೊಡಲು ಆಗದಿದ್ದರೆ ₹5,000 ಕಟ್ಟಿ, ಕೋರ್ಟ್ಗೆ ಹೋಗಬೇಕಾಗುತ್ತದೆ ಎಂದಿದ್ದಾರೆ. ಕಾನೂನು ಮೀರಿ ವರ್ತಿಸಿರುವ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.</p>.<p>ಈ ಸಂಬಂಧ ಚಿತ್ತವಾಡ್ಗಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಯಪ್ರಕಾಶ್ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ, ‘ಗಣೇಶ್ ಮಾಸ್ಕ್ ಧರಿಸಿರಲಿಲ್ಲ. ಹೀಗಾಗಿ ಅವರಿಗೆ ₹200 ದಂಡ ವಿಧಿಸಿದ್ದಾರೆ. ಶಬ್ಬೀರ್ ಯಾರಿಂದಲೂ ಲಂಚ ಪಡೆದಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಪ.ಯ. ಗಣೇಶ, ಚಂದ್ರಶೇಖರ್, ಈ. ರಘುಪತಿ, ಈಶ ನಾಯಕ, ಗಾದಿಲಿಂಗ, ಎಂ. ಯಲ್ಲಪ್ಪ, ಎಂ. ಈರಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಚಿತ್ತವಾಡ್ಗಿ ಠಾಣೆಯ ಎಎಸ್ಐ ಎಂ. ಶಬ್ಬೀರ್ ಹುಸೇನ್ ಅವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ, ಶುಕ್ರವಾರ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.</p>.<p>ನಗರದ ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಳಿಕ ಮನವಿ ಪತ್ರ ಸಲ್ಲಿಸಿದರು.</p>.<p>ಜೂ. 26ರಂದು ಸಂಜೆ 5.55ರ ಸುಮಾರಿಗೆ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ.ಯ. ಗಣೇಶ ಬೈಕ್ ಮೇಲೆ ತೆರಳುತ್ತಿದ್ದಾಗ ಅವರನ್ನು ತಡೆದ ಶಬ್ಬೀರ್ ಅವರು, ಸರ್ಕಾರಕ್ಕೆ ₹100, ನನಗೆ ₹100 ಎಂದು ಲಂಚ ಪಡೆದಿದ್ದಾರೆ. ಹಣ ಕೊಡಲು ಆಗದಿದ್ದರೆ ₹5,000 ಕಟ್ಟಿ, ಕೋರ್ಟ್ಗೆ ಹೋಗಬೇಕಾಗುತ್ತದೆ ಎಂದಿದ್ದಾರೆ. ಕಾನೂನು ಮೀರಿ ವರ್ತಿಸಿರುವ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.</p>.<p>ಈ ಸಂಬಂಧ ಚಿತ್ತವಾಡ್ಗಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಯಪ್ರಕಾಶ್ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ, ‘ಗಣೇಶ್ ಮಾಸ್ಕ್ ಧರಿಸಿರಲಿಲ್ಲ. ಹೀಗಾಗಿ ಅವರಿಗೆ ₹200 ದಂಡ ವಿಧಿಸಿದ್ದಾರೆ. ಶಬ್ಬೀರ್ ಯಾರಿಂದಲೂ ಲಂಚ ಪಡೆದಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಪ್ರತಿಭಟನೆಯಲ್ಲಿ ಪ.ಯ. ಗಣೇಶ, ಚಂದ್ರಶೇಖರ್, ಈ. ರಘುಪತಿ, ಈಶ ನಾಯಕ, ಗಾದಿಲಿಂಗ, ಎಂ. ಯಲ್ಲಪ್ಪ, ಎಂ. ಈರಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>