ತೇರು ಎಳೆಯುವಾಗ ಭಕ್ತರು ಉತ್ತತ್ತಿ, ಹೂ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ‘ಶ್ರೀರಾಮಚಂದ್ರ, ಮಲ್ಲಿಕಾರ್ಜುನ ಸ್ವಾಮಿಗೆ ಜಯವಾಗಲಿ’ ಎಂದು ಘೋಷಣೆಗಳನ್ನು ಕೂಗಿದರು. ಈ ವೇಳೆ ಯುವಕರು ಶಿಳ್ಳೆ ಹೊಡೆದು ಸಂಭ್ರಮಿಸಿದರು. ಕೆಲವರು ಕಟ್ಟಡಗಳ ಮೇಲೆ ನಿಂತು ಛಾಯಾಚಿತ್ರ, ಸೆಲ್ಫಿ ತೆಗೆದುಕೊಂಡರು. ಅಲ್ಲಿಂದಲೇ ಕೈಮುಗಿದರು.