‘ಎಲ್.ಕೆ.ಜಿ., ಯು.ಕೆ.ಜಿ. ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲೇ ಆರಂಭಿಸಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿದೆ. ಇದರಿಂದ ಅಂಗನವಾಡಿಗಳು ಬಲಗೊಳ್ಳುತ್ತವೆ. ಈ ಕುರಿತು ಹಿಂದಿನ ಸರ್ಕಾರ, ಹಾಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅನಿವಾರ್ಯವಾಗಿ ಹೋರಾಟ ನಡೆಸಬೇಕಾಗಿದೆ. ಅದಕ್ಕೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದೆ. ಅದನ್ನು ನೋಡಿ ಸರ್ಕಾರ ಹೋರಾಟವನ್ನು ಹತ್ತಿಕ್ಕಿದೆ’ ಎಂದು ದೂರಿದ್ದಾರೆ.