ಸಪೋಟ, ಪೇರಲ, ನಿಂಬೆ, ಸೀತಾಫಲ, ಮಾವು, ಪಪ್ಪಾಯ, ತೆಂಗು, ಹಲಸು ಸೇರಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು ಆಂಧ್ರದ ರಾಜಮಂಡ್ರಿಯಿಂದ ತಂದು ಬೆಳೆಸಿದ್ದಾರೆ. ಕೊಳವೆ ಬಾವಿಯ ನೀರಿನ ಮೂಲಕ ಹನಿ ನೀರಾವರಿಯಿಂದ ಬೆಳೆಗಳಿಗೆ ನೀರು ಕೊಡುತ್ತಿದ್ದಾರೆ. ತೆಂಗು, ನಿಂಬೆ, ಮಾವಿನ ಮರಗಳಲ್ಲಿ ಕಾಯಿ ಹಣ್ಣುಗಳು ತೊನೆದಾಡುತ್ತಿವೆ. ಹಲಸು, ನೇರಳೆ, ನೆಲ್ಲಿಕಾಯಿ ಬಿಡುತ್ತಿದ್ದು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದಾರೆ.