‘ಹೊರವರ್ತುಲ ರಸ್ತೆಯಲ್ಲಿ ಗುಂಡಿಗಳೇ ಗುಂಡಿ’ ಶೀರ್ಷಿಕೆಯ ಅಡಿಯಲ್ಲಿ ನ. 26ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ಅನಂತಶಯನಗುಡಿಯಿಂದ ಬಳ್ಳಾರಿ ರಸ್ತೆ ವರೆಗಿನ ಹೊರವರ್ತುಲ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಭಾರಿ ವಾಹನಗಳ ಓಡಾಟದಿಂದ ಪದೇ ಪದೇ ರಸ್ತೆ ಹಾಳಾಗುತ್ತಿರುವುದು, ಅಪಘಾತಗಳು ಸಂಭವಿಸುತ್ತಿರುವುದು ಹಾಗೂ ಇಡೀ ಪ್ರದೇಶದಲ್ಲಿ ದೂಳು ಆವರಿಸಿಕೊಂಡಿರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.