ಶೋಭಾ ಯಾತ್ರೆ: ಮಧ್ಯಾಹ್ನ 3 ಗಂಟೆಗೆ ಕಮ್ಮಭವನದಿಂದ ಬೃಹತ್ ಶೋಭಾ ಯಾತ್ರೆಯು ನಡೆಯಲಿದೆ. ಸಂಜೆ ಸಾರ್ವಜನಿಕ ಸಭೆ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಸಂಗನಬಸವ ಸ್ವಾಮಿ ಸಾನಿಧ್ಯ ವಹಿಸಲಿದ್ದಾರೆ. ಸಮಿತಿಯ ಗೌರವಾಧ್ಯಕ್ಷ ವೈ.ಎಂ.ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ವೇದಿಕೆಯ ದಜ್ಷಿಣ ಭಾರತ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.