ಸಾವಿರ ಲೀಟರ್ ಸ್ಯಾನಿಟೈಸರ್ ಸಂಗ್ರಹ ಸಾಮರ್ಥ್ಯದ ಟ್ಯಾಂಕರ್ ಹೊತ್ತ ಎರಡು ಮಿನಿ ಲಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದ ರಾಣಿ ಸಂಯುಕ್ತಾ, ‘ಹಂತ ಹಂತವಾಗಿ ನಗರದ ಎಲ್ಲ ಬಡಾವಣೆಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗುತ್ತದೆ. ಸದ್ಯ ನಾಲ್ಕು ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಅವುಗಳ ಸಂಖ್ಯೆ ಹೆಚ್ಚಿಸಲಾಗುವುದು’ ಎಂದು ತಿಳಿಸಿದರು.