ಸ್ನಾನ, ದೇವರ ದರ್ಶನದ ಬಳಿಕ ಭಕ್ತರು ಪರಸ್ಪರ ಎಳ್ಳು, ಬೆಲ್ಲ ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಕೋರಿದರು. ನಂತರ ಅವರೊಂದಿಗೆ ತಂದಿದ್ದ ಬುತ್ತಿ ಬಿಚ್ಚಿಕೊಂಡು ಕಲ್ಲು, ಬಂಡೆಗಳ ಸುತ್ತ ಕುಳಿತುಕೊಂಡು ಸವಿದರು. ನಂತರ ಕಡಲೆಕಾಳು, ಸಾಸಿವೆಕಾಳು ಗಣಪ, ಉಗ್ರ ನರಸಿಂಹ, ಕಮಲ ಮಹಲ್, ಗಜಶಾಲೆ, ಮಹಾನವಮಿ ದಿಬ್ಬ, ರಾಣಿ ಸ್ನಾನಗೃಹ, ವಿಜಯ ವಿಠಲ ದೇವಸ್ಥಾನ, ಕಲ್ಲಿನ ರಥ ಕಣ್ತುಂಬಿಕೊಂಡರು.