<p><strong>ಹೊಸಪೇಟೆ: </strong>‘ಅಕ್ಷರವೇ ಗೊತ್ತಿರದ ಕಾಲದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದವರು ಸಾವಿತ್ರಿಬಾ ಫುಲೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಚಿನ್ನಸ್ವಾಮಿ ಸೋಸಲೆ ತಿಳಿಸಿದರು.</p>.<p>ಜನನಿ ಮಹಿಳಾ ಸಬಲೀಕರಣ ಸಮಿತಿಯಿಂದ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾ ಫುಲೆ ಜನ್ಮದಿನ ಹಾಗೂ ನೈರ್ಮಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾವಿತ್ರಿಬಾ ಫುಲೆ ಅವರು ಅವರ ಮನೆಯಲ್ಲಿಯೇ ಶಾಲೆಯನ್ನು ಆರಂಭಿಸಿ ಮಹಿಳೆಯರಿಗೆ ವಿದ್ಯಾದಾನ ಮಾಡಿ ಹೊಸ ಮನ್ವಂತರಕ್ಕೆ ಕಾರಣವಾದರು. ಸಾವಿತ್ರಿ ಬಾ ಫುಲೆಯವರ ಜನ್ಮದಿನದಂದೇ ಶಿಕ್ಷಕರ ದಿನ ಆಚರಿಸಿದರೆ ಅದಕ್ಕೊಂದು ಅರ್ಥ ಬರುತ್ತದೆ’ ಎಂದು ಹೇಳಿದರು.</p>.<p>‘ಬಿ ದ ಚೇಂಜ್ ಹೊಸಪೇಟೆ’ ಸಂಸ್ಥೆಯ ಮುಖ್ಯಸ್ಥೆ ಸಂಪದ ಮಾತನಾಡಿ, ‘ಮುಟ್ಟಿನ ನೈರ್ಮಲ್ಯದ ಕುರಿತು ಇಂದಿಗೂ ಗ್ರಾಮೀಣ ಭಾಗದ ಮಹಿಳೆಯರಲ್ಲಿ ತಿಳಿವಳಿಕೆ ಕೊರತೆ ಇದೆ. ಅದನ್ನು ಹೋಗಲಾಡಿಸಿ, ಅದೊಂದು ಸಮಸ್ಯೆಯಲ್ಲ, ನೈಸರ್ಗಿಕ ಕ್ರಿಯೆ ಎನ್ನುವುದನ್ನು ತಿಳಿಸಬೇಕಿದೆ’ ಎಂದರು.</p>.<p>ಸಂಘಟನೆಯ ನೂತನ ಸದಸ್ಯೆಯರಿಗೆ ಶಾರದಾ ಕುಲಕರ್ಣಿ ಪ್ರತಿಜ್ಞಾವಿಧಿ ಬೋಧಿಸಿದರು. ಸಮಿತಿ ಅಧ್ಯಕ್ಷೆ ನಾಗವೇಣಿ ಹಂಪಿ ಅಧ್ಯಕ್ಷತೆ ವಹಿಸಿದ್ದರು. ಗೌರವ ಅಧ್ಯಕ್ಷೆ ರೇಖಾರಾಣಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಉಪಾಧ್ಯಕ್ಷರಾದ ಗೀತಾಶಂಕರ್, ರೋಫಿಯಾ, ಕಾರ್ಯದರ್ಶಿ ರಾಜೇಶ್ವರಿ, ಖಜಾಂಚಿ ಕ್ಯಾರೊಲಿನ್, ಸಂಚಾಲಕಿ ಸ್ವಾತಿ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>‘ಅಕ್ಷರವೇ ಗೊತ್ತಿರದ ಕಾಲದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದವರು ಸಾವಿತ್ರಿಬಾ ಫುಲೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಚಿನ್ನಸ್ವಾಮಿ ಸೋಸಲೆ ತಿಳಿಸಿದರು.</p>.<p>ಜನನಿ ಮಹಿಳಾ ಸಬಲೀಕರಣ ಸಮಿತಿಯಿಂದ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾ ಫುಲೆ ಜನ್ಮದಿನ ಹಾಗೂ ನೈರ್ಮಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾವಿತ್ರಿಬಾ ಫುಲೆ ಅವರು ಅವರ ಮನೆಯಲ್ಲಿಯೇ ಶಾಲೆಯನ್ನು ಆರಂಭಿಸಿ ಮಹಿಳೆಯರಿಗೆ ವಿದ್ಯಾದಾನ ಮಾಡಿ ಹೊಸ ಮನ್ವಂತರಕ್ಕೆ ಕಾರಣವಾದರು. ಸಾವಿತ್ರಿ ಬಾ ಫುಲೆಯವರ ಜನ್ಮದಿನದಂದೇ ಶಿಕ್ಷಕರ ದಿನ ಆಚರಿಸಿದರೆ ಅದಕ್ಕೊಂದು ಅರ್ಥ ಬರುತ್ತದೆ’ ಎಂದು ಹೇಳಿದರು.</p>.<p>‘ಬಿ ದ ಚೇಂಜ್ ಹೊಸಪೇಟೆ’ ಸಂಸ್ಥೆಯ ಮುಖ್ಯಸ್ಥೆ ಸಂಪದ ಮಾತನಾಡಿ, ‘ಮುಟ್ಟಿನ ನೈರ್ಮಲ್ಯದ ಕುರಿತು ಇಂದಿಗೂ ಗ್ರಾಮೀಣ ಭಾಗದ ಮಹಿಳೆಯರಲ್ಲಿ ತಿಳಿವಳಿಕೆ ಕೊರತೆ ಇದೆ. ಅದನ್ನು ಹೋಗಲಾಡಿಸಿ, ಅದೊಂದು ಸಮಸ್ಯೆಯಲ್ಲ, ನೈಸರ್ಗಿಕ ಕ್ರಿಯೆ ಎನ್ನುವುದನ್ನು ತಿಳಿಸಬೇಕಿದೆ’ ಎಂದರು.</p>.<p>ಸಂಘಟನೆಯ ನೂತನ ಸದಸ್ಯೆಯರಿಗೆ ಶಾರದಾ ಕುಲಕರ್ಣಿ ಪ್ರತಿಜ್ಞಾವಿಧಿ ಬೋಧಿಸಿದರು. ಸಮಿತಿ ಅಧ್ಯಕ್ಷೆ ನಾಗವೇಣಿ ಹಂಪಿ ಅಧ್ಯಕ್ಷತೆ ವಹಿಸಿದ್ದರು. ಗೌರವ ಅಧ್ಯಕ್ಷೆ ರೇಖಾರಾಣಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಉಪಾಧ್ಯಕ್ಷರಾದ ಗೀತಾಶಂಕರ್, ರೋಫಿಯಾ, ಕಾರ್ಯದರ್ಶಿ ರಾಜೇಶ್ವರಿ, ಖಜಾಂಚಿ ಕ್ಯಾರೊಲಿನ್, ಸಂಚಾಲಕಿ ಸ್ವಾತಿ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>