<p><strong>ವಿಜಯನಗರ (ಹೊಸಪೇಟೆ): ‘</strong>ದಮನಿತರ ಪರ ನಿಂತ ಮೊದಲ ಮಹಿಳೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ’ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ ತಿಳಿಸಿದರು.</p>.<p>ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವಿಜಯನಗರ ಜಿಲ್ಲಾ ಸಮಿತಿ ರಚನೆ, ಸಾವಿತ್ರಿಬಾಯಿ ಫುಲೆ ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾವಿತ್ರಿಬಾಯಿ ಫುಲೆ ದೇಶದ ಮೊದಲ ಮಹಿಳಾ ಶಿಕ್ಷಕಿ. ಹೀಗಾಗಿಯೇ ಅವರನ್ನು ಅಕ್ಷರದವ್ವ ಎಂದು ಕರೆಯುತ್ತಾರೆ. ದಮನಿತರಿಗಾಗಿ ಅವರು ಸಾಕಷ್ಟು ತ್ಯಾಗ ಮಾಡಿದ್ದರು. ಶೋಷಿತರ ಪರ ನಿಂತು ಅವರ ಅಕ್ಷರದ ಹಸಿವು ನೀಗಿಸಿದ ಮಹಾತಾಯಿ ಅವರು’ ಎಂದರು.</p>.<p>‘ಸತಿ ಪದ್ಧತಿ, ಬಾಲ್ಯ ವಿವಾಹ, ವಿಧವಾ ಹಿಂಸೆಯಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದರು. ಪುರುಷರಂತೆ ಮಹಿಳೆಯರಿಗೆ ಶಿಕ್ಷಣ ಸೇರಿದಂತೆ ಎಲ್ಲ ಸವಲತ್ತು ಒದಗಿಸಿಕೊಡಲು ಶ್ರಮಿಸಿದ್ದರು’ ಎಂದು ಹೇಳಿದರು.</p>.<p>ಚಿಂತಕ ಸೋಮಕ್ಕ ಮಾತನಾಡಿ, ‘ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವದ ಬೇರುಗಳು ಇನ್ನಷ್ಟು ಆಳ ಇಳಿಯಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು’ ಎಂದರು.</p>.<p>ಸಮಿತಿ ಸಂಘಟನಾ ಸಂಚಾಲಕರಾದ ಗ್ಯಾನಪ್ಪ ಬಡಿಗೇರ, ಯಲ್ಲಪ್ಪ ಹಳೆಮನೆ, ರಾಜ್ಯ ಸಮಿತಿ ಸದಸ್ಯ ಚಿದಾನಂದ, ತಾಲ್ಲೂಕು ಸಂಚಾಲಕ ಗೋಪಿನಾಥ್, ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕ ವಿ.ಯಮುನಮ್ಮ, ದೇವರಾಜ್, ಆರ್. ಭಾಸ್ಕರ್ ರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯನಗರ (ಹೊಸಪೇಟೆ): ‘</strong>ದಮನಿತರ ಪರ ನಿಂತ ಮೊದಲ ಮಹಿಳೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ’ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ ತಿಳಿಸಿದರು.</p>.<p>ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವಿಜಯನಗರ ಜಿಲ್ಲಾ ಸಮಿತಿ ರಚನೆ, ಸಾವಿತ್ರಿಬಾಯಿ ಫುಲೆ ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾವಿತ್ರಿಬಾಯಿ ಫುಲೆ ದೇಶದ ಮೊದಲ ಮಹಿಳಾ ಶಿಕ್ಷಕಿ. ಹೀಗಾಗಿಯೇ ಅವರನ್ನು ಅಕ್ಷರದವ್ವ ಎಂದು ಕರೆಯುತ್ತಾರೆ. ದಮನಿತರಿಗಾಗಿ ಅವರು ಸಾಕಷ್ಟು ತ್ಯಾಗ ಮಾಡಿದ್ದರು. ಶೋಷಿತರ ಪರ ನಿಂತು ಅವರ ಅಕ್ಷರದ ಹಸಿವು ನೀಗಿಸಿದ ಮಹಾತಾಯಿ ಅವರು’ ಎಂದರು.</p>.<p>‘ಸತಿ ಪದ್ಧತಿ, ಬಾಲ್ಯ ವಿವಾಹ, ವಿಧವಾ ಹಿಂಸೆಯಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದರು. ಪುರುಷರಂತೆ ಮಹಿಳೆಯರಿಗೆ ಶಿಕ್ಷಣ ಸೇರಿದಂತೆ ಎಲ್ಲ ಸವಲತ್ತು ಒದಗಿಸಿಕೊಡಲು ಶ್ರಮಿಸಿದ್ದರು’ ಎಂದು ಹೇಳಿದರು.</p>.<p>ಚಿಂತಕ ಸೋಮಕ್ಕ ಮಾತನಾಡಿ, ‘ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವದ ಬೇರುಗಳು ಇನ್ನಷ್ಟು ಆಳ ಇಳಿಯಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು’ ಎಂದರು.</p>.<p>ಸಮಿತಿ ಸಂಘಟನಾ ಸಂಚಾಲಕರಾದ ಗ್ಯಾನಪ್ಪ ಬಡಿಗೇರ, ಯಲ್ಲಪ್ಪ ಹಳೆಮನೆ, ರಾಜ್ಯ ಸಮಿತಿ ಸದಸ್ಯ ಚಿದಾನಂದ, ತಾಲ್ಲೂಕು ಸಂಚಾಲಕ ಗೋಪಿನಾಥ್, ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕ ವಿ.ಯಮುನಮ್ಮ, ದೇವರಾಜ್, ಆರ್. ಭಾಸ್ಕರ್ ರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>