ಈ ಕುರಿತು ಬ್ಯಾಂಕಿನ ಪ್ರಧಾನ ಶಾಖೆಯ ವ್ಯವಸ್ಥಾಪಕ ಅಭಯ್ ಕುಮಾರ್ ಸಿಂಗ್ ಅವರನ್ನು ‘ಪ್ರಜಾವಾಣಿ ಸಂಪರ್ಕಿಸಿದಾಗ, ‘ಮುಂಬೈನ ಕೇಂದ್ರ ಕಚೇರಿಯಲ್ಲಿ ಸಾಫ್ಟ್ವೇರ್ ಮೇಲ್ದರ್ಜೆಗೇರಿಸುವ ಕೆಲಸ ನಡೆಯುತ್ತಿದೆ. ಕೆಲಸ ಪೂರ್ಣಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸರಿ ಹೋದ ನಂತರ ಮೊದಲಿನಂತೆ ಎಲ್ಲ ಸೇವೆಗಳು ಆರಂಭವಾಗಲಿವೆ. ಬ್ಯಾಂಕಿನ ವಹಿವಾಟಿಗೆ ಸಂಬಂಧಿಸಿದಂತೆ ತುರ್ತು ಸೇವೆ ಬೇಕಿದ್ದರೆ ಗ್ರಾಹಕರು ಬ್ಯಾಂಕಿಗೆ ಬಂದು ತಿಳಿಸಿದರೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು’ ಎಂದು ಹೇಳಿದರು.