<p><strong>ಹೊಸಪೇಟೆ: </strong>ಇಲ್ಲಿನ ಸರ್ದಾರ್ ಪಟೇಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳ ವಿಜ್ಞಾನ ಹಬ್ಬ ಆಚರಿಸಲಾಯಿತು.</p>.<p>ಹಬ್ಬದ ಪ್ರಯುಕ್ತ ನಗರದ ವಡಕರಾಯ ದೇವಸ್ಥಾನದಿಂದ ಪ್ರಮುಖ ಮಾರ್ಗಗಳ ಮೂಲಕ ಶಾಲೆಯ ವರೆಗೆ ವಿದ್ಯಾರ್ಥಿಗಳು ಜಾಥಾ ನಡೆಸಿದರು. ಕಾಗದದಿಂದ ತಯಾರಿಸಿದ ಕಿರೀಟಗಳನ್ನು ಧರಿಸಿಕೊಂಡು ಹೆಜ್ಜೆ ಹಾಕಿದರು.</p>.<p>ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ. ಜೋಶಿ ಮಾತನಾಡಿ, ‘ಮಕ್ಕಳಲ್ಲಿ ವಿಜ್ಞಾನದ ಕಲಿಕೆ ಆಸಕ್ತಿ ಹೆಚ್ಚಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಮುದಾಯ ಒಳಗೊಳ್ಳಬೇಕು. ಆಗ ಅದಕ್ಕೆ ಹೆಚ್ಚಿನ ಅರ್ಥ ಬರುತ್ತದೆ’ ಎಂದು ಹೇಳಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜ ಮಾತನಾಡಿ, ‘ಸಹಕಾರ, ಸೌಹಾರ್ದ ಹಾಗೂ ವಿಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳ ಪ್ರತಿಭೆ ಒರೆಗೆ ಹಚ್ಚಲು ಇದೊಂದು ಉತ್ತಮ ವೇದಿಕೆ’ ಎಂದು ತಿಳಿಸಿದರು. ಬಳಿಕ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಇಲ್ಲಿನ ಸರ್ದಾರ್ ಪಟೇಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳ ವಿಜ್ಞಾನ ಹಬ್ಬ ಆಚರಿಸಲಾಯಿತು.</p>.<p>ಹಬ್ಬದ ಪ್ರಯುಕ್ತ ನಗರದ ವಡಕರಾಯ ದೇವಸ್ಥಾನದಿಂದ ಪ್ರಮುಖ ಮಾರ್ಗಗಳ ಮೂಲಕ ಶಾಲೆಯ ವರೆಗೆ ವಿದ್ಯಾರ್ಥಿಗಳು ಜಾಥಾ ನಡೆಸಿದರು. ಕಾಗದದಿಂದ ತಯಾರಿಸಿದ ಕಿರೀಟಗಳನ್ನು ಧರಿಸಿಕೊಂಡು ಹೆಜ್ಜೆ ಹಾಕಿದರು.</p>.<p>ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ. ಜೋಶಿ ಮಾತನಾಡಿ, ‘ಮಕ್ಕಳಲ್ಲಿ ವಿಜ್ಞಾನದ ಕಲಿಕೆ ಆಸಕ್ತಿ ಹೆಚ್ಚಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಮುದಾಯ ಒಳಗೊಳ್ಳಬೇಕು. ಆಗ ಅದಕ್ಕೆ ಹೆಚ್ಚಿನ ಅರ್ಥ ಬರುತ್ತದೆ’ ಎಂದು ಹೇಳಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜ ಮಾತನಾಡಿ, ‘ಸಹಕಾರ, ಸೌಹಾರ್ದ ಹಾಗೂ ವಿಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳ ಪ್ರತಿಭೆ ಒರೆಗೆ ಹಚ್ಚಲು ಇದೊಂದು ಉತ್ತಮ ವೇದಿಕೆ’ ಎಂದು ತಿಳಿಸಿದರು. ಬಳಿಕ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>