‘ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಮೊದಲನೇ ಹಂತದ ಸಮೀಕ್ಷೆ ಪೂರ್ಣಗೊಂಡಿದ್ದು, ಈಗಾಗಲೇ ಪರಿಹಾರ ವಿತರಿಸಲಾಗುತ್ತಿದೆ. ಆದಷ್ಟು ಶೀಘ್ರ ಎರಡನೇ ಹಂತದ ಬೆಳೆ ನಷ್ಟದ ಸಮೀಕ್ಷೆ ಪೂರ್ಣಗೊಳಿಸಿ, ಸಮಸ್ಯೆಯ ಸುಳಿಗೆ ಸಿಲುಕಿದವರಿಗೆ ಪರಿಹಾರ ವಿತರಿಸಲಾಗುವುದು. ಮಳೆಗೆ ಮನೆ ಬಿದ್ದರೆ ಅಂತಹವರಿಗೆ ಪೂರ್ಣ ಪರಿಹಾರ ಕೊಡಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಹೇಳಿದರು.