ಶಾಲೆಯೂ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಗೋಡೆಗೆ ಹೊಂದಿಕೊಂಡಂತೆ ಶೆಡ್ ನಿರ್ಮಿಸಿರುವುದರಿಂದ ಕಿಟಕಿ ತೆರೆಯಲು ಸಾಧ್ಯವಾಗುತ್ತಿರಲಿಲ್ಲ. ಶಬ್ದ ಮಾಲಿನ್ಯದಿಂದ ವಿದ್ಯಾರ್ಥಿಗಳಿಗೆ ಪಾಠ ಕೇಳಲು ತೊಂದರೆಯಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವರದಿ ಬಂದ ದಿನವೇ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದರು. ಅದೇ ರೀತಿ ಶೆಡ್ ತೆರವುಗೊಳಿಸಲು ನಿರ್ದೇಶನ ಕೊಟ್ಟಿದ್ದರು.