ಅಪಘಾತದಲ್ಲಿ ಮೃತಪಟ್ಟ ರೇಣುಕಮ್ಮ, ಯರ್ರಿಸ್ವಾಮಿ ಹಾಗೂ ಮಲ್ಲಮ್ಮ ಅವರ ಮನೆಗೆಶಾಸಕ ಎಲ್.ಬಿ.ಪಿ.ಭೀಮಾನಾಯ್ಕ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ್, ಸಾರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ಮೃತರ ಕುಟುಂಬದವರಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ತಲಾ ₹75 ಸಾವಿರ ರೂಪಾಯಿ ಚೆಕ್ ಹಾಗೂ ಸಾರಿಗೆ ಇಲಾಖೆಯ ವತಿಯಿಂದ ನಗದು ₹15 ಸಾವಿರ ವಿತರಿಸಲಾಯಿತು.