‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವರದಿ ನೋಡಿದೆ. ಬಳಿಕ ನನ್ನ ಸೂಚನೆ ಮೇರೆಗೆ, ರಾಜ್ಯ ಪುರಾತತ್ವ ಇಲಾಖೆಯ ಸಹಾಯಕ ಅಧಿಕಾರಿ ಮಂಜ ನಾಯ್ಕ, ಪಟ್ಟಣ ಪಂಚಾಯಿತಿ ಅಧಿಕಾರಿ ಎಚ್. ನಾಗೇಶ್, ಪ್ರಾಧಿಕಾರದ ಧನಂಜಯ, ಕಂದಾಯ ಇಲಾಖೆಯ ರವಿಚಂದ್ರ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಶಿಧರ್ ವೈ. ತಿಮ್ಮಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಗೋಡೆ ನಾಶಪಡಿಸಿರುವುದು ಗಮನಕ್ಕೆ ಬಂದಿದೆ. ಕಾಮಗಾರಿ ನಿಲ್ಲಿಸಲಾಗಿದೆ. ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿರುವ ಬಿಟಿಪಿಎಸ್ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಆಸಿಫ್ ತಿಳಿಸಿದ್ದಾರೆ.