ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಂಗಿ ಚೆನ್ನಪ್ಪ ಅವರ ಬಳಿಕ ಯಾರೂ ಅಧ್ಯಕ್ಷರಾಗಿಲ್ಲ. ಮಧ್ಯ ಕರ್ನಾಟಕ ಭಾಗದವರಿಗೂ ಅವಕಾಶ ದೊರಕಿಲ್ಲ. ಪರಿಷತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಹಿತಿಯೇ ಆಗಿರಬೇಕಿಲ್ಲ. ಸಾಹಿತ್ಯ, ಸಾಹಿತಿಗಳ ಕುರಿತ ಕಾಳಜಿ, ಆಸಕ್ತಿಯಿಂದ ಬಳ್ಳಾರಿಯಿಂದ ಸ್ಪರ್ಧಿಸಲು ಬಯಸಿರುವೆ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.