<p><strong>ಹೊಸಪೇಟೆ(ವಿಜಯನಗರ): </strong>‘ನಗರದಲ್ಲಿ ಸುಗಮ ವಾಹನ ಸಂಚಾರಕ್ಕಾಗಿ ಹೊಸ ಮಾರ್ಗಸೂಚಿ ಇಷ್ಟರಲ್ಲೇ ಹೊರಡಿಸಲಾಗುವುದು’ ಎಂದು ಡಿವೈಎಸ್ಪಿ ವಿ. ರಘುಕುಮಾರ ತಿಳಿಸಿದರು.</p>.<p>‘ಈಗಾಗಲೇ ಈ ಸಂಬಂಧ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ. ಸಮೀಕ್ಷೆ ಪೂರ್ಣಗೊಂಡ ನಂತರ ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ, ಪಾರ್ಕಿಂಗ್ ನಿಯಮ ಜಾರಿಗೆ ತರಲಾಗುವುದು’ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ನಗರ ವ್ಯಾಪ್ತಿಯಲ್ಲಿ 35 ಸಾವಿರ ದ್ವಿಚಕ್ರ, 15 ಸಾವಿರ ನಾಲ್ಕು ಚಕ್ರ ಹಾಗೂ 2 ಸಾವಿರ ಆಟೊ ರಿಕ್ಷಾಗಳಿವೆ. ವಿಜಯನಗರ ಜಿಲ್ಲೆ ಘೋಷಣೆ ಆಗಿರುವುದರಿಂದ ಬರುವ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ಭವಿಷ್ಯದಲ್ಲಿ ಸಂಚಾರ ಅಸ್ತವ್ಯಸ್ತವಾಗದಂತೆ ತಡೆಯುವುದಕ್ಕಾಗಿ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಸಂಚಾರ ವ್ಯವಸ್ಥೆಗೆ ಅಗತ್ಯವಿರುವ ಸಲಕರಣೆಗೆ ನಗರಸಭೆಯಿಂದ 45 ಲಕ್ಷ ಅನುದಾನ ಬಿಡುಗಡೆಯಾಗಿದೆ. ನಗರಸಭೆಯ ಸಹಕಾರದೊಂದಿಗೆ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ ಹಾಗೂ ಬಸ್ ನಿಲ್ದಾಣ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ): </strong>‘ನಗರದಲ್ಲಿ ಸುಗಮ ವಾಹನ ಸಂಚಾರಕ್ಕಾಗಿ ಹೊಸ ಮಾರ್ಗಸೂಚಿ ಇಷ್ಟರಲ್ಲೇ ಹೊರಡಿಸಲಾಗುವುದು’ ಎಂದು ಡಿವೈಎಸ್ಪಿ ವಿ. ರಘುಕುಮಾರ ತಿಳಿಸಿದರು.</p>.<p>‘ಈಗಾಗಲೇ ಈ ಸಂಬಂಧ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ. ಸಮೀಕ್ಷೆ ಪೂರ್ಣಗೊಂಡ ನಂತರ ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ, ಪಾರ್ಕಿಂಗ್ ನಿಯಮ ಜಾರಿಗೆ ತರಲಾಗುವುದು’ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>‘ನಗರ ವ್ಯಾಪ್ತಿಯಲ್ಲಿ 35 ಸಾವಿರ ದ್ವಿಚಕ್ರ, 15 ಸಾವಿರ ನಾಲ್ಕು ಚಕ್ರ ಹಾಗೂ 2 ಸಾವಿರ ಆಟೊ ರಿಕ್ಷಾಗಳಿವೆ. ವಿಜಯನಗರ ಜಿಲ್ಲೆ ಘೋಷಣೆ ಆಗಿರುವುದರಿಂದ ಬರುವ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ಭವಿಷ್ಯದಲ್ಲಿ ಸಂಚಾರ ಅಸ್ತವ್ಯಸ್ತವಾಗದಂತೆ ತಡೆಯುವುದಕ್ಕಾಗಿ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಸಂಚಾರ ವ್ಯವಸ್ಥೆಗೆ ಅಗತ್ಯವಿರುವ ಸಲಕರಣೆಗೆ ನಗರಸಭೆಯಿಂದ 45 ಲಕ್ಷ ಅನುದಾನ ಬಿಡುಗಡೆಯಾಗಿದೆ. ನಗರಸಭೆಯ ಸಹಕಾರದೊಂದಿಗೆ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ ಹಾಗೂ ಬಸ್ ನಿಲ್ದಾಣ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>