ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕೆ.ತಿಮ್ಮಾರೆಡ್ಡಿ ಪ್ರತಿಕ್ರಿಯಿಸಿ, ‘ಹಳ್ಳದಲ್ಲಿ ಮುಳ್ಳು ಬೇಲಿ, ಗಿಡಗಂಟಿಗಳು, ತ್ಯಾಜ್ಯ ಅಧಿಕವಾಗಿದೆ. ರಬ್ಬರ್ ಬೋಟ್ ಬಳಸಲು ಸಾಧ್ಯವಾಗಿಲ್ಲ. 11ಜನ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಸ್ಥಳೀಯರೂ ತೆಪ್ಪಗಳನ್ನು ಬಳಸಿದರು ಪ್ರಯೋಜನವಾಗಿಲ್ಲ. ಸಂಜೆ ಮಳೆಯಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ‘ ಎಂದು ವಿವರಿಸಿದರು.