ನಡು ರಸ್ತೆಯಲ್ಲೇ ಬಿಡಾಡಿ ದನಗಳು ಬೀಡು ಬಿಟ್ಟಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇತ್ತೀಚೆಗೆ ನಗರಸಭೆ ಪ್ರಕಟಣೆ ಹೊರಡಿಸಿ, ದನಗಳನ್ನು ರಸ್ತೆಗೆ ಬಿಟ್ಟರೆ ಗೋಶಾಲೆಗಳಿಗೆ ಸಾಗಿಸಲಾಗುವುದು. ಮಾಲೀಕರು ಅವುಗಳನ್ನು ಬಿಡದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿತ್ತು. ಆದರೆ, ಅದು ಎಚ್ಚರಿಕೆಗಷ್ಟೇ ಸೀಮಿತವಾಗಿದ್ದು, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.