<p><strong>ಹೊಸಪೇಟೆ:</strong> ದೀನ್ ದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಂಗವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ನಗರಸಭೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿ ಶಿಬಿರಕ್ಕೆ ನಗರದಲ್ಲಿಬುಧವಾರ ಚಾಲನೆ ನೀಡಲಾಯಿತು.</p>.<p>‘ಬೀದಿ ಬದಿ ವ್ಯಾಪಾರಿಗಳ ಹಿತ ಕಾಯಲು ಕಾಯ್ದೆ ತರಲಾಗಿದೆ. ಎಲ್ಲ ವ್ಯಾಪಾರಿಗಳು ನಗರಸಭೆಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು’ ಎಂದು ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಪೌರಾಯುಕ್ತ ವಿ. ರಮೇಶ್ ತಿಳಿಸಿದರು.</p>.<p>‘ಬೀದಿ ಬದಿ ವ್ಯಾಪಾರಿಗಳಿಗೆ ಏನಾದರೂ ಸಮಸ್ಯೆ ಎದುರಾದರೆ ನಗರಸಭೆ ಗಮನಕ್ಕೆ ತರಬೇಕು. ಅದಕ್ಕೆ ಸ್ಪಂದಿಸಿ ಪರಿಹಾರ ಒದಗಿಸಲಾಗುವುದು’ ಎಂದು ಹೇಳಿದರು.</p>.<p>ಬಿ.ಡಿ.ಸಿ.ಸಿ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಶಶಿಕಾಂತ ಮಾತನಾಡಿ, ‘ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ’ ತಿಳಿಸಿದರು.</p>.<p>ಪ್ರಭಾರ ತಾಲ್ಲೂಕು ವೈದ್ಯಾಧಿಕಾರಿ ಪವನ್ ಕುಮಾರ ಮಾತನಾಡಿ, ‘ಕಡಿಮೆ ಬೆಲೆಯಲ್ಲಿ ಆಹಾರ ದೊರೆಯುತ್ತದೆ ಎಂದು ಜನ ಬೀದಿ ಬದಿಯಲ್ಲಿ ಉಪಾಹಾರ, ಆಹಾರ ಸೇವಿಸುತ್ತಾರೆ. ಹಾಗಾಗಿ ವ್ಯಾಪಾರಿಗಳು ಸ್ವಚ್ಛತೆ, ಗುಣಮಟ್ಟಕ್ಕೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ನಗರಸಭೆ ಸದಸ್ಯ ಎ.ಬಸವರಾಜ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಶಿಬಿರದ ಸಂಘಟನಾಕಾರ ಚಿದಾನಂದ, ಪ್ರಾಧ್ಯಾಪಕ ದಯಾನಂದ ಕಿನ್ನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ದೀನ್ ದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಂಗವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ನಗರಸಭೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿ ಶಿಬಿರಕ್ಕೆ ನಗರದಲ್ಲಿಬುಧವಾರ ಚಾಲನೆ ನೀಡಲಾಯಿತು.</p>.<p>‘ಬೀದಿ ಬದಿ ವ್ಯಾಪಾರಿಗಳ ಹಿತ ಕಾಯಲು ಕಾಯ್ದೆ ತರಲಾಗಿದೆ. ಎಲ್ಲ ವ್ಯಾಪಾರಿಗಳು ನಗರಸಭೆಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು’ ಎಂದು ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಪೌರಾಯುಕ್ತ ವಿ. ರಮೇಶ್ ತಿಳಿಸಿದರು.</p>.<p>‘ಬೀದಿ ಬದಿ ವ್ಯಾಪಾರಿಗಳಿಗೆ ಏನಾದರೂ ಸಮಸ್ಯೆ ಎದುರಾದರೆ ನಗರಸಭೆ ಗಮನಕ್ಕೆ ತರಬೇಕು. ಅದಕ್ಕೆ ಸ್ಪಂದಿಸಿ ಪರಿಹಾರ ಒದಗಿಸಲಾಗುವುದು’ ಎಂದು ಹೇಳಿದರು.</p>.<p>ಬಿ.ಡಿ.ಸಿ.ಸಿ. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಶಶಿಕಾಂತ ಮಾತನಾಡಿ, ‘ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ’ ತಿಳಿಸಿದರು.</p>.<p>ಪ್ರಭಾರ ತಾಲ್ಲೂಕು ವೈದ್ಯಾಧಿಕಾರಿ ಪವನ್ ಕುಮಾರ ಮಾತನಾಡಿ, ‘ಕಡಿಮೆ ಬೆಲೆಯಲ್ಲಿ ಆಹಾರ ದೊರೆಯುತ್ತದೆ ಎಂದು ಜನ ಬೀದಿ ಬದಿಯಲ್ಲಿ ಉಪಾಹಾರ, ಆಹಾರ ಸೇವಿಸುತ್ತಾರೆ. ಹಾಗಾಗಿ ವ್ಯಾಪಾರಿಗಳು ಸ್ವಚ್ಛತೆ, ಗುಣಮಟ್ಟಕ್ಕೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ನಗರಸಭೆ ಸದಸ್ಯ ಎ.ಬಸವರಾಜ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಶಿಬಿರದ ಸಂಘಟನಾಕಾರ ಚಿದಾನಂದ, ಪ್ರಾಧ್ಯಾಪಕ ದಯಾನಂದ ಕಿನ್ನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>