ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ. ಆದರೆ, ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಜುಲೈ 10 ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.