ಎಸ್ಸಿ, ಎಸ್ಟಿ ಸೇರಿದಂತೆ ಇತರೆ ವರ್ಗದ ಎಲ್ಲ ಮಕ್ಕಳಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುವುದು ಎಂದು ಸರ್ಕಾರಿ ಹೋದ ವರ್ಷದ ಬಜೆಟ್ನಲ್ಲಿ ಭರವಸೆ ನೀಡಿತ್ತು. ಆದರೆ, ಇದುವರಗೆ ಅದನ್ನು ಈಡೇರಿಸಿಲ್ಲ. ರಾಜ್ಯದಾದ್ಯಂತ ಬರಗಾಲದ ವಾತಾವರಣ ಇದೆ. ಖಾಸಗಿ ಶಾಲಾ–ಕಾಲೇಜುಗಳಲ್ಲಿ ಡೊನೋಷನ್ ಹಾವಳಿಯಿಂದ ವಿದ್ಯಾರ್ಥಿಗಳು ಸಮಸ್ಯೆಗೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪಾಸ್ ಕೊಟ್ಟರೆ ಅವರಿಗೆ ಅನುಕೂಲವಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.