ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಅವರಿಗೆ ಸಮಿತಿಯ ಸದಸ್ಯರು ಮನವಿ ಪತ್ರ ಸಲ್ಲಿಸಿದರು.
ಸರ್ಕಾರದಿಂದ ಒದಗಿಸಲಾಗುವ ಜಾತಿ ಪ್ರಮಾಣ ಪತ್ರ, ನಿವೇಶನ ಸೇರಿದಂತೆ ವಿವಿಧ ಮೂಲಕ ಸೌಕರ್ಯ ಒದಗಿಸುವ ಕುರಿತು ಸಮುದಾಯದ ಜನರ ಜೊತೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮತ್ತು ತಾಲ್ಲೂಕು ಸಂಯೋಜನಾಧಿಕಾರಿಗಳ ಕುಂದುಕೊರತೆ ಸಭೆ ನಡೆಸಲು ಆದೇಶ ನೀಡಬೇಕು ಎಂದು ಒತ್ತಾಯಿಸಿದರು.