<p><strong>ಕಂಪ್ಲಿ: </strong>ತಾಲ್ಲೂಕಿನ ಮೆಟ್ರಿ ಗ್ರಾಮದ ಬಳಿಯ ಮಾರೆಮ್ಮ ದೇವಸ್ಥಾನದ ರಾಜ್ಯ ಹೆದ್ದಾರಿ-29ರಲ್ಲಿ ಸೋಮವಾರ ಸಂಭವಿಸಿದ ಎರಡು ಬೈಕ್ ಡಿಕ್ಕಿ ಅಪಘಾತದಲ್ಲಿ ಗಾಯಗೊಂಡ ಮಗು ಮತ್ತು ವ್ಯಕ್ತಿಯೊಬ್ಬರನ್ನು ತಹಶೀಲ್ದಾರ್ ತಮ್ಮ ವಾಹನದಲ್ಲಿ ಕರೆದುಕೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.</p>.<p>ಮೆಟ್ರಿಯಿಂದ ಕಂಪ್ಲಿಗೆ ತಹಶೀಲ್ದಾರ್ ಗೌಸಿಯಾಬೇಗಂ, ಗ್ರಾಮ ಲೆಕ್ಕಾಧಿಕಾರಿ ಜಿಲಾನ್ ಜೀಪ್ನಲ್ಲಿ ತೆರಳುತ್ತಿದ್ದಾಗ ಪ್ರಸ್ತುತ ಅಪಘಾತ ಸಂಭವಿಸಿದ್ದು, ರಕ್ತಸ್ರಾವದಿಂದ ನರಳುತ್ತಿದ್ದ 5 ವರ್ಷದ ಗಂಡು ಮಗು ಕಾರ್ತಿಕ್ ಮತ್ತು ಗಾಯಗೊಂಡ ಬೈಕ್ ಸವಾರ ಮಾರುತಿ (23) ಅರನ್ನು ತಕ್ಷಣ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ.</p>.<p>ಗಾಯಾಳುಗಳು ಗಂಗಾವತಿ ತಾಲ್ಲೂಕಿನ ಡಣಾಪುರ ಗ್ರಾಮದವರಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ನಗರಕ್ಕೆ ತೆರಳಿದರು ಎಂದು ಡಾ. ಮಲ್ಲೇಶಪ್ಪ ಮಾಹಿತಿ ನೀಡಿದರು. ಮತ್ತೊಂದು ಬೈಕ್ನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ: </strong>ತಾಲ್ಲೂಕಿನ ಮೆಟ್ರಿ ಗ್ರಾಮದ ಬಳಿಯ ಮಾರೆಮ್ಮ ದೇವಸ್ಥಾನದ ರಾಜ್ಯ ಹೆದ್ದಾರಿ-29ರಲ್ಲಿ ಸೋಮವಾರ ಸಂಭವಿಸಿದ ಎರಡು ಬೈಕ್ ಡಿಕ್ಕಿ ಅಪಘಾತದಲ್ಲಿ ಗಾಯಗೊಂಡ ಮಗು ಮತ್ತು ವ್ಯಕ್ತಿಯೊಬ್ಬರನ್ನು ತಹಶೀಲ್ದಾರ್ ತಮ್ಮ ವಾಹನದಲ್ಲಿ ಕರೆದುಕೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.</p>.<p>ಮೆಟ್ರಿಯಿಂದ ಕಂಪ್ಲಿಗೆ ತಹಶೀಲ್ದಾರ್ ಗೌಸಿಯಾಬೇಗಂ, ಗ್ರಾಮ ಲೆಕ್ಕಾಧಿಕಾರಿ ಜಿಲಾನ್ ಜೀಪ್ನಲ್ಲಿ ತೆರಳುತ್ತಿದ್ದಾಗ ಪ್ರಸ್ತುತ ಅಪಘಾತ ಸಂಭವಿಸಿದ್ದು, ರಕ್ತಸ್ರಾವದಿಂದ ನರಳುತ್ತಿದ್ದ 5 ವರ್ಷದ ಗಂಡು ಮಗು ಕಾರ್ತಿಕ್ ಮತ್ತು ಗಾಯಗೊಂಡ ಬೈಕ್ ಸವಾರ ಮಾರುತಿ (23) ಅರನ್ನು ತಕ್ಷಣ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ.</p>.<p>ಗಾಯಾಳುಗಳು ಗಂಗಾವತಿ ತಾಲ್ಲೂಕಿನ ಡಣಾಪುರ ಗ್ರಾಮದವರಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ನಗರಕ್ಕೆ ತೆರಳಿದರು ಎಂದು ಡಾ. ಮಲ್ಲೇಶಪ್ಪ ಮಾಹಿತಿ ನೀಡಿದರು. ಮತ್ತೊಂದು ಬೈಕ್ನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>