<p><strong>ಹೊಸಪೇಟೆ:</strong> ‘ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ‘ರೋಜಗಾರ್ ಮಿತ್ರ’ ಯೋಜನೆ ಜಾರಿಗೆ ತರಲಾಗಿದೆ’ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ತಿಳಿಸಿದರು.</p>.<p>ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಂಡಾಗಳಿಂದ ಜನ ವಲಸೆ ಹೋಗದಂತೆ ತಡೆಯುವುದು ನಮ್ಮ ಮುಖ್ಯ ಉದ್ದೇಶ. ಗ್ರಾಮೀಣ ಅಭಿವೃದ್ಧಿ ಇಲಾಖೆ ಹಾಗೂ ತಾಂಡಾ ನಿಗಮದ ಸಹಭಾಗಿತ್ವದಲ್ಲಿ ತಾಂಡಾ ‘ರೋಜಗಾರ್ ಮಿತ್ರ’ ಜಾರಿಗೆ ತರಲಾಗಿದೆ. ನಿಗಮದಿಂದ 300 ಯುವಕರನ್ನು ‘ರೋಜಗಾರ್ ಮಿತ್ರ’ ಎಂದು ನೇಮಕ ಮಾಡಿಕೊಳ್ಳಲಾಗುವುದು’ ಎಂದರು.</p>.<p>‘ತಾಂಡಾದಿಂದ ಬೇರೆಡೆ ವಲಸೆ ಹೋದವರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ಮಂಡ್ಯದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ತಾಲ್ಲೂಕಿನ ತಾಳೆಬಸಾಪುರ ಗ್ರಾಮದ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ₹8.50 ಲಕ್ಷ ಪರಿಹಾರ ನೀಡಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಕಾನೂನು ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಆದರೆ, ಕೃತ್ಯ ಎಸಗಿದವರನ್ನು ಶೂಟೌಟ್ ಮಾಡಿ ಕೊಚ್ಚಿ ಪೀಸ್ ಪೀಸ್ ಮಾಡಿದರೇ ಇನ್ನೊಂದು ಘಟನೆ ನಡೆಯಲ್ಲ ಅಂತ ಹೇಳುವುದಕ್ಕೆ ಬರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ‘ರೋಜಗಾರ್ ಮಿತ್ರ’ ಯೋಜನೆ ಜಾರಿಗೆ ತರಲಾಗಿದೆ’ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ತಿಳಿಸಿದರು.</p>.<p>ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಂಡಾಗಳಿಂದ ಜನ ವಲಸೆ ಹೋಗದಂತೆ ತಡೆಯುವುದು ನಮ್ಮ ಮುಖ್ಯ ಉದ್ದೇಶ. ಗ್ರಾಮೀಣ ಅಭಿವೃದ್ಧಿ ಇಲಾಖೆ ಹಾಗೂ ತಾಂಡಾ ನಿಗಮದ ಸಹಭಾಗಿತ್ವದಲ್ಲಿ ತಾಂಡಾ ‘ರೋಜಗಾರ್ ಮಿತ್ರ’ ಜಾರಿಗೆ ತರಲಾಗಿದೆ. ನಿಗಮದಿಂದ 300 ಯುವಕರನ್ನು ‘ರೋಜಗಾರ್ ಮಿತ್ರ’ ಎಂದು ನೇಮಕ ಮಾಡಿಕೊಳ್ಳಲಾಗುವುದು’ ಎಂದರು.</p>.<p>‘ತಾಂಡಾದಿಂದ ಬೇರೆಡೆ ವಲಸೆ ಹೋದವರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ಮಂಡ್ಯದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ತಾಲ್ಲೂಕಿನ ತಾಳೆಬಸಾಪುರ ಗ್ರಾಮದ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ₹8.50 ಲಕ್ಷ ಪರಿಹಾರ ನೀಡಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಕಾನೂನು ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಆದರೆ, ಕೃತ್ಯ ಎಸಗಿದವರನ್ನು ಶೂಟೌಟ್ ಮಾಡಿ ಕೊಚ್ಚಿ ಪೀಸ್ ಪೀಸ್ ಮಾಡಿದರೇ ಇನ್ನೊಂದು ಘಟನೆ ನಡೆಯಲ್ಲ ಅಂತ ಹೇಳುವುದಕ್ಕೆ ಬರುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>