ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಾಂಡಾ ರೋಜಗಾರ್‌ ಮಿತ್ರ’ ಜಾರಿಗೆ: ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜೀವ್

Last Updated 6 ಡಿಸೆಂಬರ್ 2020, 12:11 IST
ಅಕ್ಷರ ಗಾತ್ರ

ಹೊಸಪೇಟೆ: ‘ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ‘ರೋಜಗಾರ್‌ ಮಿತ್ರ’ ಯೋಜನೆ ಜಾರಿಗೆ ತರಲಾಗಿದೆ’ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ತಿಳಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಂಡಾಗಳಿಂದ ಜನ ವಲಸೆ ಹೋಗದಂತೆ ತಡೆಯುವುದು ನಮ್ಮ ಮುಖ್ಯ ಉದ್ದೇಶ. ಗ್ರಾಮೀಣ ಅಭಿವೃದ್ಧಿ ಇಲಾಖೆ ಹಾಗೂ ತಾಂಡಾ ನಿಗಮದ ಸಹಭಾಗಿತ್ವದಲ್ಲಿ ತಾಂಡಾ ‘ರೋಜಗಾರ್‌ ಮಿತ್ರ’ ಜಾರಿಗೆ ತರಲಾಗಿದೆ. ನಿಗಮದಿಂದ 300 ಯುವಕರನ್ನು ‘ರೋಜಗಾರ್ ಮಿತ್ರ’ ಎಂದು ನೇಮಕ ಮಾಡಿಕೊಳ್ಳಲಾಗುವುದು’ ಎಂದರು.

‘ತಾಂಡಾದಿಂದ ಬೇರೆಡೆ ವಲಸೆ ಹೋದವರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ಮಂಡ್ಯದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ತಾಲ್ಲೂಕಿನ ತಾಳೆಬಸಾಪುರ ಗ್ರಾಮದ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ₹8.50 ಲಕ್ಷ ಪರಿಹಾರ ನೀಡಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಕಾನೂನು ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಆದರೆ, ಕೃತ್ಯ ಎಸಗಿದವರನ್ನು ಶೂಟೌಟ್ ಮಾಡಿ ಕೊಚ್ಚಿ ಪೀಸ್ ಪೀಸ್ ಮಾಡಿದರೇ ಇನ್ನೊಂದು ಘಟನೆ ನಡೆಯಲ್ಲ ಅಂತ ಹೇಳುವುದಕ್ಕೆ ಬರುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT