ಹಡಗಲಿ ತಾಲ್ಲೂಕಿನ ಕುರುವತ್ತಿ ಮಲ್ಲಿಕಾರ್ಜುನ ಮತ್ತು ಬಸವೇಶ್ವರ ಸ್ವಾಮಿ ದೇವಸ್ಥಾನ, ಕೊಟ್ಟೂರಿನ ಗುರು ಬಸವೇಶ್ವರ ದೇವಸ್ಥಾನಗಳಿಗೆ ಭಾನುವಾರ, ಸೋಮವಾರ ಮತ್ತು ಅಮವಾಸ್ಯೆಗೆ ಭೇಟಿ ಕೊಡುವಂತಿಲ್ಲ. ಹಡಗಲಿ ತಾಲ್ಲೂಕಿನ ಮದಲಗಟ್ಟಿಯ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶನಿವಾರ, ಭಾನುವಾರ ಹಾಗೂ ಪ್ರತಿ ಅಮವಾಸ್ಯೆ ಜನರ ದರ್ಶನಕ್ಕೆ ಅವಕಾಶ ಇರುವುದಿಲ್ಲ.