<p><strong>ಹೊಸಪೇಟೆ:</strong> ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ ಎಂದು ತಪ್ಪು ಭಾವಿಸಿ ನಗರಸಭೆ ಸಿಬ್ಬಂದಿಗೆ ಸ್ಥಳೀಯ ಯುವಕರು ಪ್ರತಿರೋಧ ತೋರಿಸಿ ಅವರ ಕೆಲಸಕ್ಕೆ ಅಡ್ಡಿಪಡಿಸಿದ್ದರಿಂದ ಮಂಗಳವಾರ ಸಂಜೆ ಇಲ್ಲಿನ ಹಜರತ್ ಷಾ ವಲಿ ಮಸೀದಿ ಬಳಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.</p>.<p>ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳೀಯ ಯುವಕರಿಗೆ ಮನವರಿಕೆ ಮಾಡಿಕೊಟ್ಟ ನಂತರ ವಾತಾವರಣ ತಿಳಿಗೊಂಡಿತು.</p>.<p>‘ನಗರಸಭೆಯು ಈ ಹಿಂದೆ ಮಸೀದಿಗೆ ಹೊಂದಿಕೊಂಡಂತೆ ನಿರ್ಮಿಸಿದ್ದ ಕೆಲ ಮಳಿಗೆಗಳನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿತ್ತು. ಬಳಿಕ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಕಾರ್ಯಾಚರಣೆ ಕೈಬಿಟ್ಟಿತು. ಕಟ್ಟಡಗಳ ಅವಶೇಷಗಳು ಅಲ್ಲಿಯೇ ಬಿದ್ದದ್ದರಿಂದ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಮಂಗಳವಾರ ಸಂಜೆ ನಗರಸಭೆ ಸಿಬ್ಬಂದಿಯು ಜೆ.ಸಿ.ಬಿ., ಟ್ರ್ಯಾಕ್ಟರ್ನೊಂದಿಗೆ ಸ್ಥಳಕ್ಕೆ ತೆರಳಿ, ಅವಶೇಷ ತೆರವುಗೊಳಿಸಲು ಮುಂದಾಗಿದ್ದರು. ತಡೆಯಾಜ್ಞೆಯಿದ್ದರೂ ತೆರವು ಕಾರ್ಯಾಚರಣೆಗೆ ಬಂದಿದ್ದಾರೆ ಎಂದು ತಪ್ಪಾಗಿ ತಿಳಿದು ಅಲ್ಲಿದ್ದ ಯುವಕರು ನಗರಸಭೆಯ ಸಿಬ್ಬಂದಿಗೆ ತಡೆಯೊಡ್ಡಿದ್ದಾರೆ. ಬಳಿಕ ಅವರೊಂದಿಗೆ ವಾಗ್ವಾದ ನಡೆಸಿ, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಯುವಕರಿಗೆ ವಸ್ತುಸ್ಥಿತಿ ತಿಳಿಸಿದ ನಂತರ ಸುಮ್ಮನಾದರು’ ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಇದೊಂದು ಆಕಸ್ಮಿಕವಾಗಿ ನಡೆದ ಘಟನೆ. ತಪ್ಪು ತಿಳಿವಳಿಕೆಯಿಂದ ಯುವಕರು ಆವೇಶಭರಿತರಾಗಿ ಆ ರೀತಿ ವರ್ತಿಸಿದ್ದಾರೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ತಪ್ಪಾಗಿ ಭಾವಿಸಿ ನಮ್ಮ ಸಿಬ್ಬಂದಿಯ ಜತೆ ಸ್ಥಳೀಯ ಯುವಕರು ವಾಗ್ವಾದ ನಡೆಸಿ, ನೂಕಾಟ, ತಳ್ಳಾಟ ನಡೆಸಿದ್ದಾರೆ. ಬೇರೇನೂ ಆಗಿಲ್ಲ. ಬಳಿಕ ವಿಷಯ ಗೊತ್ತಾಗಿ ಸುಮ್ಮನಾಗಿದ್ದಾರೆ’ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ ಎಂದು ತಪ್ಪು ಭಾವಿಸಿ ನಗರಸಭೆ ಸಿಬ್ಬಂದಿಗೆ ಸ್ಥಳೀಯ ಯುವಕರು ಪ್ರತಿರೋಧ ತೋರಿಸಿ ಅವರ ಕೆಲಸಕ್ಕೆ ಅಡ್ಡಿಪಡಿಸಿದ್ದರಿಂದ ಮಂಗಳವಾರ ಸಂಜೆ ಇಲ್ಲಿನ ಹಜರತ್ ಷಾ ವಲಿ ಮಸೀದಿ ಬಳಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.</p>.<p>ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳೀಯ ಯುವಕರಿಗೆ ಮನವರಿಕೆ ಮಾಡಿಕೊಟ್ಟ ನಂತರ ವಾತಾವರಣ ತಿಳಿಗೊಂಡಿತು.</p>.<p>‘ನಗರಸಭೆಯು ಈ ಹಿಂದೆ ಮಸೀದಿಗೆ ಹೊಂದಿಕೊಂಡಂತೆ ನಿರ್ಮಿಸಿದ್ದ ಕೆಲ ಮಳಿಗೆಗಳನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿತ್ತು. ಬಳಿಕ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಕಾರ್ಯಾಚರಣೆ ಕೈಬಿಟ್ಟಿತು. ಕಟ್ಟಡಗಳ ಅವಶೇಷಗಳು ಅಲ್ಲಿಯೇ ಬಿದ್ದದ್ದರಿಂದ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಮಂಗಳವಾರ ಸಂಜೆ ನಗರಸಭೆ ಸಿಬ್ಬಂದಿಯು ಜೆ.ಸಿ.ಬಿ., ಟ್ರ್ಯಾಕ್ಟರ್ನೊಂದಿಗೆ ಸ್ಥಳಕ್ಕೆ ತೆರಳಿ, ಅವಶೇಷ ತೆರವುಗೊಳಿಸಲು ಮುಂದಾಗಿದ್ದರು. ತಡೆಯಾಜ್ಞೆಯಿದ್ದರೂ ತೆರವು ಕಾರ್ಯಾಚರಣೆಗೆ ಬಂದಿದ್ದಾರೆ ಎಂದು ತಪ್ಪಾಗಿ ತಿಳಿದು ಅಲ್ಲಿದ್ದ ಯುವಕರು ನಗರಸಭೆಯ ಸಿಬ್ಬಂದಿಗೆ ತಡೆಯೊಡ್ಡಿದ್ದಾರೆ. ಬಳಿಕ ಅವರೊಂದಿಗೆ ವಾಗ್ವಾದ ನಡೆಸಿ, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಯುವಕರಿಗೆ ವಸ್ತುಸ್ಥಿತಿ ತಿಳಿಸಿದ ನಂತರ ಸುಮ್ಮನಾದರು’ ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ಇದೊಂದು ಆಕಸ್ಮಿಕವಾಗಿ ನಡೆದ ಘಟನೆ. ತಪ್ಪು ತಿಳಿವಳಿಕೆಯಿಂದ ಯುವಕರು ಆವೇಶಭರಿತರಾಗಿ ಆ ರೀತಿ ವರ್ತಿಸಿದ್ದಾರೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ತಪ್ಪಾಗಿ ಭಾವಿಸಿ ನಮ್ಮ ಸಿಬ್ಬಂದಿಯ ಜತೆ ಸ್ಥಳೀಯ ಯುವಕರು ವಾಗ್ವಾದ ನಡೆಸಿ, ನೂಕಾಟ, ತಳ್ಳಾಟ ನಡೆಸಿದ್ದಾರೆ. ಬೇರೇನೂ ಆಗಿಲ್ಲ. ಬಳಿಕ ವಿಷಯ ಗೊತ್ತಾಗಿ ಸುಮ್ಮನಾಗಿದ್ದಾರೆ’ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>