ಹೊಸಪೇಟೆ: ಪಂಪಾ ವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಭಾನುವಾರ ರಾತ್ರಿ ತಾಲ್ಲೂಕಿನ ಹಂಪಿ ಮನ್ಮಥತೀರ್ಥದಲ್ಲಿ ನಡೆಯಿತು.
ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ವಿಶೇಷವಾಗಿ ಅಲಂಕರಿಸಿದ ತೆಪ್ಪದಲ್ಲಿ ತೆಪ್ಪೋತ್ಸವ ನಡೆಯಿತು. ಈ ವೇಳೆ ಭಕ್ತರ ಜಯಘೋಷ ಮುಗಿಲು ಮುಟ್ಟಿತ್ತು.
ಬೆಳಿಗ್ಗೆ ಚಕ್ರತೀರ್ಥ ಕೋದಂಡರಾಮಸ್ವಾಮಿ ಕಲ್ಯಾಣೋತ್ಸವ ಹಾಗೂ ರಥೋತ್ಸವ ಜರುಗಿತು. . ವಿವಿಧ ಕಡೆಗಳಿಂದ ನೂರಾರು ಭಕ್ತರು ಬಂದು ದರ್ಶನ ಪಡೆದರು. ಇದರೊಂದಿಗೆ ಬ್ರಹ್ಮರಥೋತ್ಸವದ ಎಲ್ಲ ಕಾರ್ಯಕ್ರಮಗಳು ಕೊನೆಗೊಂಡವು.