<p><strong>ಹೊಸಪೇಟೆ: </strong>‘ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ’ ಯೋಜನೆಯಡಿ ಬಿ.ಪಿ.ಎಲ್. ಪಡಿತರದಾರರಿಗೆ ಉಚಿತವಾಗಿ ಕಾರ್ಡುಗಳನ್ನು ವಿತರಿಸಲಾಗುತ್ತಿದ್ದು, ಯಾರೊಬ್ಬರೂ ಹಣ ಪಾವತಿಸಬೇಕಿಲ್ಲ’ ಎಂದು ಇಲ್ಲಿನ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಸಲೀಂ ತಿಳಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಒನ್, ಸೇವಾ ಸಿಂಧು ಕೇಂದ್ರಗಳಲ್ಲಿ ಬಿಪಿಎಲ್ ಕಾರ್ಡುದಾರರು ₹10, ಎಪಿಎಲ್ ಕಾರ್ಡುದಾರರು 35 ಶುಲ್ಕ ಪಾವತಿಸಿ ಆರೋಗ್ಯ ಕಾರ್ಡು ಪಡೆಯಬಹುದು. ಯಾವುದೇ ಕಾರಣಕ್ಕೂ ಅದಕ್ಕಿಂತ ಹೆಚ್ಚಿನ ಶುಲ್ಕ ನೀಡಬಾರದು. ಯಾರು ಕೂಡ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿಗೆ ಪಡೆಯಬಾರದು. ಅದು ಕಾನೂನುಬಾಹಿರ’ ಎಂದು ಹೇಳಿದ್ದಾರೆ.</p>.<p>‘ನೋಂದಾಯಿತ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಸಂಪೂರ್ಣ ಉಚಿತ,ಎ.ಪಿ.ಎಲ್. ಕಾರ್ಡು ಹೊಂದಿದವರಿಂದ ಶೇ 30ರಷ್ಟು ಚಿಕಿತ್ಸಾ ವೆಚ್ಚವನ್ನು ಭರಿಸಿಕೊಂಡು, ಚಿಕಿತ್ಸೆ ನೀಡಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>‘ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ’ ಯೋಜನೆಯಡಿ ಬಿ.ಪಿ.ಎಲ್. ಪಡಿತರದಾರರಿಗೆ ಉಚಿತವಾಗಿ ಕಾರ್ಡುಗಳನ್ನು ವಿತರಿಸಲಾಗುತ್ತಿದ್ದು, ಯಾರೊಬ್ಬರೂ ಹಣ ಪಾವತಿಸಬೇಕಿಲ್ಲ’ ಎಂದು ಇಲ್ಲಿನ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಸಲೀಂ ತಿಳಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಒನ್, ಸೇವಾ ಸಿಂಧು ಕೇಂದ್ರಗಳಲ್ಲಿ ಬಿಪಿಎಲ್ ಕಾರ್ಡುದಾರರು ₹10, ಎಪಿಎಲ್ ಕಾರ್ಡುದಾರರು 35 ಶುಲ್ಕ ಪಾವತಿಸಿ ಆರೋಗ್ಯ ಕಾರ್ಡು ಪಡೆಯಬಹುದು. ಯಾವುದೇ ಕಾರಣಕ್ಕೂ ಅದಕ್ಕಿಂತ ಹೆಚ್ಚಿನ ಶುಲ್ಕ ನೀಡಬಾರದು. ಯಾರು ಕೂಡ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿಗೆ ಪಡೆಯಬಾರದು. ಅದು ಕಾನೂನುಬಾಹಿರ’ ಎಂದು ಹೇಳಿದ್ದಾರೆ.</p>.<p>‘ನೋಂದಾಯಿತ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಸಂಪೂರ್ಣ ಉಚಿತ,ಎ.ಪಿ.ಎಲ್. ಕಾರ್ಡು ಹೊಂದಿದವರಿಂದ ಶೇ 30ರಷ್ಟು ಚಿಕಿತ್ಸಾ ವೆಚ್ಚವನ್ನು ಭರಿಸಿಕೊಂಡು, ಚಿಕಿತ್ಸೆ ನೀಡಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>