<p><strong>ಹೊಸಪೇಟೆ (ವಿಜಯನಗರ): ‘</strong>ಕಲಾಕೃತಿಗಳೆಂಬ ಸಾಧನದ ಮೂಲಕ ಎಲ್ಲ ವರ್ಗದ ಜನರನ್ನು ತಲುಪಬಹುದು. ಆ ಶಕ್ತಿ ಕಲೆಗಿದೆ’ ಎಂದು ವಿಜಯ ಚಿತ್ರಕಲಾ ಕಾಲೇಜಿನ ಪ್ರಾಚಾರ್ಯ ಬಸವರಾಜ ಗವಿಮಠ ತಿಳಿಸಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ಕಲಾ ಗ್ಯಾಲರಿಯಲ್ಲಿ ಆನಂದ ಪತ್ರಿಮಠ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಕಲಾಕೃತಿಗಳ ರಚನೆ ಒಂದು ತಪಸ್ಸಿನ ಕೆಲಸ. ಅದು ಶ್ರದ್ಧೆ, ಆಸಕ್ತಿಯನ್ನು ಬಯಸುವ ಕ್ಷೇತ್ರ. ಜಾಗತೀಕರಣ, ತಂತ್ರಜ್ಞಾನದಲ್ಲಾದ ಬದಲಾವಣೆಯಿಂದ ದೃಶ್ಯಕಲಾ ಕ್ಷೇತ್ರದಲ್ಲೂ ಬದಲಾವಣೆಗಳಾಗಿವೆ ಎಂದರು.</p>.<p>ಹಿರಿಯ ಕಲಾವಿದ ನಾರಾಯಣ ಜೋಶಿ, ದೃಶ್ಯ ಕಲಾಕೃತಿಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಿದೆ. ಬಹುತೇಕ ಕಲಾವಿದರು ಸಂವಹನದ ಕೊರತೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಕಲೆಯನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಾಧ್ಯಮಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದು ಉತ್ತಮ ಎಂದು ಹೇಳಿದರು.</p>.<p>ಕುಲಸಚಿವ ಎ.ಸುಬ್ಬಣ್ಣ ರೈ ಮಾತನಾಡಿ, ಕಲಾವಿದರು ಕಲೆಯ ಮೂಲಕ ನವರಸಗಳನ್ನು ಮತ್ತು ಭಾವನೆಗಳನ್ನು ಅಭಿವ್ಯಕ್ತಿಗೊಳಿಸುತ್ತಾರೆ. ದೃಶ್ಯಕಲಾ ವಿದ್ಯಾರ್ಥಿಗಳಿಗೆ ಕಲೆ ಒಂದು ವೇದಿಕೆ. ಅದರ ಮೂಲಕ ಅಕ್ಷರದ ಜ್ಞಾನದೊಂದಿಗೆ ಆದಾಯ ಕೂಡ ಗಳಿಸಬಹುದು ಎಂದರು.</p>.<p>ದೃಶ್ಯಕಲಾ ವಿಭಾಗದ ಮುಖ್ಯಸ್ಥ ಮೋಹನ್ರಾವ್ ಬಿ. ಪಾಂಚಾಳ್, ಮಣಿಕಂಠ, ಎಚ್.ಎನ್. ಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): ‘</strong>ಕಲಾಕೃತಿಗಳೆಂಬ ಸಾಧನದ ಮೂಲಕ ಎಲ್ಲ ವರ್ಗದ ಜನರನ್ನು ತಲುಪಬಹುದು. ಆ ಶಕ್ತಿ ಕಲೆಗಿದೆ’ ಎಂದು ವಿಜಯ ಚಿತ್ರಕಲಾ ಕಾಲೇಜಿನ ಪ್ರಾಚಾರ್ಯ ಬಸವರಾಜ ಗವಿಮಠ ತಿಳಿಸಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ಕಲಾ ಗ್ಯಾಲರಿಯಲ್ಲಿ ಆನಂದ ಪತ್ರಿಮಠ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಕಲಾಕೃತಿಗಳ ರಚನೆ ಒಂದು ತಪಸ್ಸಿನ ಕೆಲಸ. ಅದು ಶ್ರದ್ಧೆ, ಆಸಕ್ತಿಯನ್ನು ಬಯಸುವ ಕ್ಷೇತ್ರ. ಜಾಗತೀಕರಣ, ತಂತ್ರಜ್ಞಾನದಲ್ಲಾದ ಬದಲಾವಣೆಯಿಂದ ದೃಶ್ಯಕಲಾ ಕ್ಷೇತ್ರದಲ್ಲೂ ಬದಲಾವಣೆಗಳಾಗಿವೆ ಎಂದರು.</p>.<p>ಹಿರಿಯ ಕಲಾವಿದ ನಾರಾಯಣ ಜೋಶಿ, ದೃಶ್ಯ ಕಲಾಕೃತಿಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಿದೆ. ಬಹುತೇಕ ಕಲಾವಿದರು ಸಂವಹನದ ಕೊರತೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಕಲೆಯನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಾಧ್ಯಮಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದು ಉತ್ತಮ ಎಂದು ಹೇಳಿದರು.</p>.<p>ಕುಲಸಚಿವ ಎ.ಸುಬ್ಬಣ್ಣ ರೈ ಮಾತನಾಡಿ, ಕಲಾವಿದರು ಕಲೆಯ ಮೂಲಕ ನವರಸಗಳನ್ನು ಮತ್ತು ಭಾವನೆಗಳನ್ನು ಅಭಿವ್ಯಕ್ತಿಗೊಳಿಸುತ್ತಾರೆ. ದೃಶ್ಯಕಲಾ ವಿದ್ಯಾರ್ಥಿಗಳಿಗೆ ಕಲೆ ಒಂದು ವೇದಿಕೆ. ಅದರ ಮೂಲಕ ಅಕ್ಷರದ ಜ್ಞಾನದೊಂದಿಗೆ ಆದಾಯ ಕೂಡ ಗಳಿಸಬಹುದು ಎಂದರು.</p>.<p>ದೃಶ್ಯಕಲಾ ವಿಭಾಗದ ಮುಖ್ಯಸ್ಥ ಮೋಹನ್ರಾವ್ ಬಿ. ಪಾಂಚಾಳ್, ಮಣಿಕಂಠ, ಎಚ್.ಎನ್. ಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>