<p><strong>ಹೊಸಪೇಟೆ:</strong> ‘ಹಂಪಿ ಉತ್ಸವ’ದ ಪ್ರಯುಕ್ತ ಶನಿವಾರ (ಜ.4) ಸಂಜೆ 5.30ಕ್ಕೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಮಗ್ಗುಲಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಆರತಿ ಕಾರ್ಯಕ್ರಮ ನಡೆಯಲಿದೆ.</p>.<p>ಈಗಾಗಲೇ ನದಿಯಲ್ಲಿನ ಬಂಡೆಗಳಿಗೆ ಸುಣ್ಣ ಬಳಿದು, ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಆರತಿ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ವೇದಿಕೆ ನಿರ್ಮಿಸಲಾಗಿದೆ.</p>.<p>ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಪೂಜಾ ಕಾರ್ಯಕ್ರಮ ನಡೆಸಿಕೊಡುವರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಾಗಿನ ಸಮರ್ಪಿಸುವರು. ಶಾಸಕ ಆನಂದ್ ಸಿಂಗ್, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೇರಿದಂತೆ ಹಲವರು ಪಾಲ್ಗೊಳ್ಳುವರು.</p>.<p>ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಸಾರಿಗೆ ಸಂಸ್ಥೆಯು ನಗರದಿಂದ ಹಂಪಿಗೆ ಬಸ್ ವ್ಯವಸ್ಥೆ ಕಲ್ಪಿಸಿದೆ. ದೇಶದ ಸುಭಿಕ್ಷೆಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಭುವನೇಶ್ವರಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಕರೆ ತರಲಾಗುತ್ತದೆ. ನದಿ ತಟದಲ್ಲಿ ಸಾಲಾಗಿ ದೀಪಗಳ ಅಲಂಕಾರ ಮಾಡಲಾಗುತ್ತದೆ. ಕೊನೆಯಲ್ಲಿ ಸಿಡಿಮದ್ದು ಸುಡುವ ಕಾರ್ಯಕ್ರಮ ಜರುಗುತ್ತದೆ.</p>.<p><strong>ಸಿದ್ಧತಾ ಸಭೆ:</strong></p>.<p>ಜ. 10, 11ರಂದು ನಡೆಯಲಿರುವ ಉತ್ಸವದ ಸಿದ್ಧತೆ ಕುರಿತು ಲಕ್ಷ್ಮಣ ಸವದಿ ಅವರು ಶನಿವಾರ ಸಂಜೆ 4ಕ್ಕೆ ತಾಲ್ಲೂಕಿನ ಕಮಲಾಪುರದಲ್ಲಿ ಸಭೆ ನಡೆಸುವರು.</p>.<p>ಸಿದ್ಧತೆಗೆ ಏನೇನು ಕ್ರಮ ಕೈಗೊಳ್ಳಲಾಗಿದೆ ಎನ್ನುವುದನ್ನು ವಿವಿಧ ಸಮಿತಿಗಳ ಅಧ್ಯಕ್ಷರಿಂದ ಮಾಹಿತಿ ಪಡೆಯುವರು. ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.</p>.<p><strong>ಛಾಯಾಚಿತ್ರ ಸ್ಪರ್ಧೆ ಅವಧಿ ವಿಸ್ತರಣೆ:</strong></p>.<p>ಉತ್ಸವದ ಪ್ರಯುಕ್ತ ಛಾಯಾಚಿತ್ರ ಸ್ಪರ್ಧೆ ಹಮ್ಮಿಕೊಂಡಿದ್ದು, ಆಸಕ್ತ ಛಾಯಾಗ್ರಾಹಕರು ಅರ್ಜಿ ಸಲ್ಲಿಸಲು ಜ. 8ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಜ. 5 ಕೊನೆಯ ದಿನವಾಗಿತ್ತು.</p>.<p>ಹಂಪಿಯ ಸ್ಮಾರಕಗಳು, ಪ್ರಾಕೃತಿಕ ಚಿತ್ರಣ, ಗ್ರಾಮೀಣ ಬದುಕು, ವನ್ಯಜೀವಿ, ಹಂಪಿಯ ಸಾಂಸ್ಕೃತಿಕ ಪರಂಪರೆ, ಜೀವಜಾಲಕ್ಕೆ ಸಂಬಂಧಿಸಿದ ಛಾಯಾಚಿತ್ರ ಕಳುಹಿಸಬಹುದು.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08392-273465, 7019495512, 9449624548 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಹಂಪಿ ಉತ್ಸವ’ದ ಪ್ರಯುಕ್ತ ಶನಿವಾರ (ಜ.4) ಸಂಜೆ 5.30ಕ್ಕೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಮಗ್ಗುಲಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಆರತಿ ಕಾರ್ಯಕ್ರಮ ನಡೆಯಲಿದೆ.</p>.<p>ಈಗಾಗಲೇ ನದಿಯಲ್ಲಿನ ಬಂಡೆಗಳಿಗೆ ಸುಣ್ಣ ಬಳಿದು, ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಆರತಿ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ವೇದಿಕೆ ನಿರ್ಮಿಸಲಾಗಿದೆ.</p>.<p>ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಪೂಜಾ ಕಾರ್ಯಕ್ರಮ ನಡೆಸಿಕೊಡುವರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಾಗಿನ ಸಮರ್ಪಿಸುವರು. ಶಾಸಕ ಆನಂದ್ ಸಿಂಗ್, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೇರಿದಂತೆ ಹಲವರು ಪಾಲ್ಗೊಳ್ಳುವರು.</p>.<p>ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಸಾರಿಗೆ ಸಂಸ್ಥೆಯು ನಗರದಿಂದ ಹಂಪಿಗೆ ಬಸ್ ವ್ಯವಸ್ಥೆ ಕಲ್ಪಿಸಿದೆ. ದೇಶದ ಸುಭಿಕ್ಷೆಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಭುವನೇಶ್ವರಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಕರೆ ತರಲಾಗುತ್ತದೆ. ನದಿ ತಟದಲ್ಲಿ ಸಾಲಾಗಿ ದೀಪಗಳ ಅಲಂಕಾರ ಮಾಡಲಾಗುತ್ತದೆ. ಕೊನೆಯಲ್ಲಿ ಸಿಡಿಮದ್ದು ಸುಡುವ ಕಾರ್ಯಕ್ರಮ ಜರುಗುತ್ತದೆ.</p>.<p><strong>ಸಿದ್ಧತಾ ಸಭೆ:</strong></p>.<p>ಜ. 10, 11ರಂದು ನಡೆಯಲಿರುವ ಉತ್ಸವದ ಸಿದ್ಧತೆ ಕುರಿತು ಲಕ್ಷ್ಮಣ ಸವದಿ ಅವರು ಶನಿವಾರ ಸಂಜೆ 4ಕ್ಕೆ ತಾಲ್ಲೂಕಿನ ಕಮಲಾಪುರದಲ್ಲಿ ಸಭೆ ನಡೆಸುವರು.</p>.<p>ಸಿದ್ಧತೆಗೆ ಏನೇನು ಕ್ರಮ ಕೈಗೊಳ್ಳಲಾಗಿದೆ ಎನ್ನುವುದನ್ನು ವಿವಿಧ ಸಮಿತಿಗಳ ಅಧ್ಯಕ್ಷರಿಂದ ಮಾಹಿತಿ ಪಡೆಯುವರು. ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು.</p>.<p><strong>ಛಾಯಾಚಿತ್ರ ಸ್ಪರ್ಧೆ ಅವಧಿ ವಿಸ್ತರಣೆ:</strong></p>.<p>ಉತ್ಸವದ ಪ್ರಯುಕ್ತ ಛಾಯಾಚಿತ್ರ ಸ್ಪರ್ಧೆ ಹಮ್ಮಿಕೊಂಡಿದ್ದು, ಆಸಕ್ತ ಛಾಯಾಗ್ರಾಹಕರು ಅರ್ಜಿ ಸಲ್ಲಿಸಲು ಜ. 8ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಜ. 5 ಕೊನೆಯ ದಿನವಾಗಿತ್ತು.</p>.<p>ಹಂಪಿಯ ಸ್ಮಾರಕಗಳು, ಪ್ರಾಕೃತಿಕ ಚಿತ್ರಣ, ಗ್ರಾಮೀಣ ಬದುಕು, ವನ್ಯಜೀವಿ, ಹಂಪಿಯ ಸಾಂಸ್ಕೃತಿಕ ಪರಂಪರೆ, ಜೀವಜಾಲಕ್ಕೆ ಸಂಬಂಧಿಸಿದ ಛಾಯಾಚಿತ್ರ ಕಳುಹಿಸಬಹುದು.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08392-273465, 7019495512, 9449624548 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>