ಶಿಬಿರ ಉದ್ಘಾಟಿಸಿದ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ ಅಧಿಕಾರಿ ಮೌನೇಶ ಬಡಿಗೇರ, ‘ಅನೇಕ ಜನ ಗ್ರಾಮ ಪಂಚಾಯಿತಿಗೆ ಹೊಸದಾಗಿ ಆಯ್ಕೆಯಾಗಿರುತ್ತಾರೆ. ಕೆಲವರು ಕಾರಣಾಂತರಗಳಿಂದ ಶಿಕ್ಷಣ ಪಡೆಯುವುದಿಲ್ಲ. ಯಾವ ಇಲಾಖೆ ಯಾವ ಕೆಲಸ ಮಾಡುತ್ತದೆ ಎನ್ನುವುದು ಗೊತ್ತಿರುವುದಿಲ್ಲ. ಈ ಎಲ್ಲ ವಿಚಾರಗಳನ್ನು ಶಿಬಿರದಲ್ಲಿ ತಿಳಿಸಿಕೊಡಲಾಗುತ್ತದೆ. ಇದರಿಂದ ಅವರು ಪಂಚಾಯಿತಿ ಸಭೆಯಲ್ಲಿ ಪರಿಣಾಮಕಾರಿ ಮಾತನಾಡಿ, ಆಯಾ ಇಲಾಖೆಯ ಪ್ರಗತಿ ಕುರಿತು ಮಾಹಿತಿ ಪಡೆಯಲು ಸಹಾಯವಾಗುತ್ತದೆ’ ಎಂದು ಹೇಳಿದರು.