<p><strong>ಹೊಸಪೇಟೆ:</strong> ಗ್ರಾಮ ಪಂಚಾಯಿತಿ ಸದಸ್ಯರಿಗೆ ಎಲ್ಲ ಇಲಾಖೆಗಳ ಮಾಹಿತಿ ಒದಗಿಸುವ 21 ದಿನಗಳ ಸಾಕ್ಷರ ಶಿಬಿರ ಸೋಮವಾರ ನಗರದಲ್ಲಿ ಆರಂಭಗೊಂಡಿತು.</p>.<p>ಶಿಬಿರ ಉದ್ಘಾಟಿಸಿದ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ ಅಧಿಕಾರಿ ಮೌನೇಶ ಬಡಿಗೇರ, ‘ಅನೇಕ ಜನ ಗ್ರಾಮ ಪಂಚಾಯಿತಿಗೆ ಹೊಸದಾಗಿ ಆಯ್ಕೆಯಾಗಿರುತ್ತಾರೆ. ಕೆಲವರು ಕಾರಣಾಂತರಗಳಿಂದ ಶಿಕ್ಷಣ ಪಡೆಯುವುದಿಲ್ಲ. ಯಾವ ಇಲಾಖೆ ಯಾವ ಕೆಲಸ ಮಾಡುತ್ತದೆ ಎನ್ನುವುದು ಗೊತ್ತಿರುವುದಿಲ್ಲ. ಈ ಎಲ್ಲ ವಿಚಾರಗಳನ್ನು ಶಿಬಿರದಲ್ಲಿ ತಿಳಿಸಿಕೊಡಲಾಗುತ್ತದೆ. ಇದರಿಂದ ಅವರು ಪಂಚಾಯಿತಿ ಸಭೆಯಲ್ಲಿ ಪರಿಣಾಮಕಾರಿ ಮಾತನಾಡಿ, ಆಯಾ ಇಲಾಖೆಯ ಪ್ರಗತಿ ಕುರಿತು ಮಾಹಿತಿ ಪಡೆಯಲು ಸಹಾಯವಾಗುತ್ತದೆ’ ಎಂದು ಹೇಳಿದರು.</p>.<p>‘ಈಗಾಗಲೇ ಜಿಲ್ಲೆಯ ಸಂಡೂರು, ಸಿರುಗುಪ್ಪದಲ್ಲಿ ಈ ರೀತಿಯ ಶಿಬಿರವನ್ನು ನಡೆಸಲಾಗಿದೆ. ಅಲ್ಲಿನ ಸದಸ್ಯರು ಭಾಗವಹಿಸಿ ಅದರ ಪ್ರಯೋಜನ ಪಡೆದುಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಶೇ 75ರಷ್ಟು ಸಾಕ್ಷರತೆ ಇದೆ. ಬಳ್ಳಾರಿ ಜಿಲೆಯಲ್ಲಿ ಶೇ 68 ಸಾಕ್ಷರತೆ ಪ್ರಮಾಣ ಇದೆ. ಅದನ್ನು ಶೇ 95ರಷ್ಟು ಮಾಡುವ ಗುರಿ ಹಾಕಿಕೊಳ್ಳಲಾಗಿದೆ‘ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ, ಉಪಾಧ್ಯಕ್ಷ ಎಂ.ಶಿವಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕುಮಾರ, ತಾಲ್ಲೂಕು ವಯಸ್ಕರ ಶಿಕ್ಷಣ ಸಮಿತಿ ಅಧಿಕಾರಿ ವರಪ್ರಸಾದರಾವ್ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಗ್ರಾಮ ಪಂಚಾಯಿತಿ ಸದಸ್ಯರಿಗೆ ಎಲ್ಲ ಇಲಾಖೆಗಳ ಮಾಹಿತಿ ಒದಗಿಸುವ 21 ದಿನಗಳ ಸಾಕ್ಷರ ಶಿಬಿರ ಸೋಮವಾರ ನಗರದಲ್ಲಿ ಆರಂಭಗೊಂಡಿತು.</p>.<p>ಶಿಬಿರ ಉದ್ಘಾಟಿಸಿದ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ ಅಧಿಕಾರಿ ಮೌನೇಶ ಬಡಿಗೇರ, ‘ಅನೇಕ ಜನ ಗ್ರಾಮ ಪಂಚಾಯಿತಿಗೆ ಹೊಸದಾಗಿ ಆಯ್ಕೆಯಾಗಿರುತ್ತಾರೆ. ಕೆಲವರು ಕಾರಣಾಂತರಗಳಿಂದ ಶಿಕ್ಷಣ ಪಡೆಯುವುದಿಲ್ಲ. ಯಾವ ಇಲಾಖೆ ಯಾವ ಕೆಲಸ ಮಾಡುತ್ತದೆ ಎನ್ನುವುದು ಗೊತ್ತಿರುವುದಿಲ್ಲ. ಈ ಎಲ್ಲ ವಿಚಾರಗಳನ್ನು ಶಿಬಿರದಲ್ಲಿ ತಿಳಿಸಿಕೊಡಲಾಗುತ್ತದೆ. ಇದರಿಂದ ಅವರು ಪಂಚಾಯಿತಿ ಸಭೆಯಲ್ಲಿ ಪರಿಣಾಮಕಾರಿ ಮಾತನಾಡಿ, ಆಯಾ ಇಲಾಖೆಯ ಪ್ರಗತಿ ಕುರಿತು ಮಾಹಿತಿ ಪಡೆಯಲು ಸಹಾಯವಾಗುತ್ತದೆ’ ಎಂದು ಹೇಳಿದರು.</p>.<p>‘ಈಗಾಗಲೇ ಜಿಲ್ಲೆಯ ಸಂಡೂರು, ಸಿರುಗುಪ್ಪದಲ್ಲಿ ಈ ರೀತಿಯ ಶಿಬಿರವನ್ನು ನಡೆಸಲಾಗಿದೆ. ಅಲ್ಲಿನ ಸದಸ್ಯರು ಭಾಗವಹಿಸಿ ಅದರ ಪ್ರಯೋಜನ ಪಡೆದುಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ರಾಜ್ಯದಲ್ಲಿ ಶೇ 75ರಷ್ಟು ಸಾಕ್ಷರತೆ ಇದೆ. ಬಳ್ಳಾರಿ ಜಿಲೆಯಲ್ಲಿ ಶೇ 68 ಸಾಕ್ಷರತೆ ಪ್ರಮಾಣ ಇದೆ. ಅದನ್ನು ಶೇ 95ರಷ್ಟು ಮಾಡುವ ಗುರಿ ಹಾಕಿಕೊಳ್ಳಲಾಗಿದೆ‘ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ, ಉಪಾಧ್ಯಕ್ಷ ಎಂ.ಶಿವಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕುಮಾರ, ತಾಲ್ಲೂಕು ವಯಸ್ಕರ ಶಿಕ್ಷಣ ಸಮಿತಿ ಅಧಿಕಾರಿ ವರಪ್ರಸಾದರಾವ್ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>