ಹಂಪಿ ವಿ.ವಿ.ಯಿಂದ ಮರಗಳ ತೆರವಿಗೆ ತಡೆ

ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಸಮೀಪದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಮಂಗಳವಾರ ಗಿಡ, ಮರಗಳನ್ನು ಕಡಿಯುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ತಡೆದಿದ್ದಾರೆ.
‘ವಿ.ವಿ.ಗೆ ಸೇರಿದ ಜಾಗದಲ್ಲಿ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಮರಗಳನ್ನು ಕಡಿಯುತ್ತಿದ್ದರು. ಮರ ಸಂರಕ್ಷಣಾ ಕಾಯ್ದೆ ಪ್ರಕಾರ, ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಆದರೆ, ಅವರು ಪಡೆದಿರಲಿಲ್ಲ. ಹಾಗಾಗಿ ಮರಗಳನ್ನು ಕಡಿಯುವುದನ್ನು ನಿಲ್ಲಿಸಿದ್ದೇವೆ’ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಎಂ. ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ವಿ.ವಿ. ಆವರಣದಲ್ಲಿ ಬೇವು, ಹೊಂಗೆ ಸೇರಿದಂತೆ ಇತರೆ ಜಾತಿಯ ಮರಗಳನ್ನು ಬುಡಸಮೇತ ತೆರವುಗೊಳಿಸಲಾಗುತ್ತಿತ್ತು. ಅದು ಅರಣ್ಯ ಕಾಯ್ದೆಗೆ ವಿರುದ್ಧವಾದುದು. ಕೂಡಲೇ ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದರಿಂದ ಅವರು ತಡೆದಿದ್ದಾರೆ’ ಎಂದು ‘ಹುಮ್ಯಾನಿಟಿ’ ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ್ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.