ನವದೆಹಲಿ: ಐಆರ್ಸಿಟಿಸಿ ಹೋಟೆಲ್ ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಪತ್ನಿ ರಾಬ್ಡಿದೇವಿ ಹಾಗೂ ಅವರ ಪುತ್ರ ತೇಜಸ್ವಿ ಯಾದವ್ ವಿರುದ್ಧ ಮೊಕದ್ದಮೆ ದಾಖಲಿಸಲು ದೆಹಲಿ ನ್ಯಾಯಾಲಯ ಸಿಬಿಐಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.
ಈ ಅವಧಿಯಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಅನುಮೋದನೆ ಪಡೆಯುವಂತೆ ಸೂಚಿಸಲಾಗಿದೆ.
ರೈಲ್ವೆ ಮಂಡಳಿಯ ಹೆಚ್ಚುವರಿ ಸದಸ್ಯ ಬಿ.ಕೆ. ಅಗರವಾಲ್ ವಿರುದ್ಧವೂ ಮೊಕದ್ದಮೆ ದಾಖಲಿಸಲು ಜೂನ್ 1ರ ಒಳಗೆ ಅಗತ್ಯವಿರುವ ಅನುಮತಿ ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ. ಅಗರವಾಲ್ ಅವರು ಐಆರ್ಸಿಟಿಸಿ ಹೋಟೆಲ್ಗಳ ಪ್ರಧಾನ ವ್ಯವಸ್ಥಾಪಕರಾಗಿಯೂ ಈ ಹಿಂದೆ ಕಾರ್ಯನಿರ್ವವಹಿಸಿದ್ದರು.
ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಲವು ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಂಪನಿಗಳು ಮತ್ತು 12 ಮಂದಿ ವಿರುದ್ಧ ಸಿಬಿಐ ಏಪ್ರಿಲ್ 16ರಂದು ಆರೋಪಪಟ್ಟಿ ಸಲ್ಲಿಸಿತ್ತು.