ನದಿ ತಟದಲ್ಲಿ ನಿರ್ಮಿಸಿದ್ದ ಸುಂದರವಾದ ಕಿರು ವೇದಿಕೆಯಲ್ಲಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿರೂಪಾಕ್ಷೇಶ್ವರ ಸ್ವಾಮಿ, ಪಂಪಾಂಬಿಕೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಂತ್ರಘೋಷಗಳ ನಡುವೆ ಸ್ವಾಮೀಜಿ, ಅರಣ್ಯ ಸಚಿವ ಆನಂದ್ ಸಿಂಗ್ ಅವರು ನದಿಗೆ ಬಾಗಿನ ಸಮರ್ಪಿಸಿದರು. ನಂತರ ತುಂಗೆಗೆ ಆರತಿ ಬೆಳಗಿದರು.