ಹೊಸಪೇಟೆ: ಇಲ್ಲಿನ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಭಾನುವಾರ ಭಾರಿ ಇಳಿಮುಖಗೊಂಡಿದೆ.
ತುಂಗಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಹರಿಸುವುದು ದಿನೇ ದಿನೇ ಕಡಿಮೆ ಮಾಡುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಕಮ್ಮಿಯಾಗಿದೆ.
ಭಾನುವಾರ 12 ಕ್ರಸ್ಟ್ಗೇಟ್ಗಳನ್ನು ತಲಾ ಒಂದುವರೆ ಅಡಿ ಮೇಲಕ್ಕೆತ್ತಿ 29,753 ಕ್ಯುಸೆಕ್ ನೀರು ನದಿಗೆ ಹರಿಸಲಾಯಿತು. 33,356 ಕ್ಯುಸೆಕ್ ಒಳಹರಿವು ದಾಖಲಾಗಿದೆ.
1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,632.92 ಅಡಿ ನೀರಿನ ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಶಿವಮೊಗ್ಗದ ತುಂಗಾ ಜಲಾಶಯದ ಹೊರಹರಿವು 20,022 ಕ್ಯುಸೆಕ್ಗೆ ತಗ್ಗಿರುವುದರಿಂದ ತುಂಗಭದ್ರಾ ಜಲಾಶಯದ ಒಳಹರಿವು ಕಮ್ಮಿಯಾಗಿದೆ. ಅಣೆಕಟ್ಟೆ ಸಂಪೂರ್ಣ ತುಂಬಿದ್ದು, ಒಳಹರಿವು ನೋಡಿಕೊಂಡು ನದಿಗೆ ನೀರು ಹರಿಸಲಾಗುತ್ತಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.