<p><strong>ಹೊಸಪೇಟೆ (ವಿಜಯನಗರ): ಇ</strong>ಲ್ಲಿನ ತುಂಗಭದ್ರಾ ಜಲಾಶಯದ ನೀರು ಈ ವರ್ಷವೂ ಹಸಿರು ಬಣ್ಣಕ್ಕೆ ತಿರುಗಿದೆ.</p>.<p>ಆದರೆ, ಈ ವರ್ಷ ಅವಧಿಗೂ ಮುನ್ನವೇ ಹಸಿರಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯದಿಂದ ಅಕ್ಟೋಬರ್ ವರೆಗೆ ಪ್ರತಿವರ್ಷ ಇಡೀ ಜಲಾಶಯದ ನೀರು ಹಸಿರಾಗುತ್ತದೆ.</p>.<p>ಸಯಾನೋ ಬ್ಯಾಕ್ಟೀರಿಯಾಗಳು (ಬ್ಲೂ ಗ್ರೀನ್ ಅಲ್ಗಿ) ಇಡೀ ಜಲಾಶಯವನ್ನು ಆಕ್ರಮಿಸಿಕೊಂಡು ನೀರನ್ನು ಹಸಿರಾಗಿಸುತ್ತವೆ. ಜಲಾನಯನ ಪ್ರದೇಶದ ಕೃಷಿ ಭೂಮಿಯಲ್ಲಿ ರಸಗೊಬ್ಬರಗಳ ಹೆಚ್ಚಿನ ಬಳಕೆ ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ನೇರವಾಗಿ ನದಿಗೆ ಹರಿದು ಬರುವುದರಿಂದ ಸಯಾನೋ ಬ್ಯಾಕ್ಟೀರಿಯಾ ಉತ್ಪತ್ತಿಯಾಗುತ್ತದೆ.</p>.<p>‘ರಸಗೊಬ್ಬರಗಳಲ್ಲಿನ ರಂಜಕ, ಗಂಧಕ, ಸಾರಜನಕ ಹಾಗೂ ಕೈಗಾರಿಕೆಗಳ ತ್ಯಾಜ್ಯದಿಂದ ಸಯಾನೋ ಬ್ಯಾಕ್ಟಿರಿಯಾ ಹುಟ್ಟುಕೊಳ್ಳುತ್ತದೆ. ಮೋಡ ಕವಿದ ವಾತಾವರಣದ ನಡುವೆ ಆಗಾಗ ಬಿರು ಬಿಸಿಲಿನಿಂದ ಅದರ ಉತ್ಪತ್ತಿ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗುತ್ತದೆ. ಈ ನೀರನ್ನು ಜನ, ಜಾನುವಾರು, ಪಕ್ಷಿಗಳು ನೇರವಾಗಿ ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ನೀರಿಗಿಳಿದರೆ ಚರ್ಮರೋಗವೂ ತಗುಲಬಹುದು’ ಎಂದು ಪರಿಸರ, ವನ್ಯಜೀವಿ ತಜ್ಞ ಸಮದ್ ಕೊಟ್ಟೂರು ತಿಳಿಸಿದರು.</p>.<p>‘ನೈಸರ್ಗಿಕವಾಗಿ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಸಯಾನೋ ಬ್ಯಾಕ್ಟೀರಿಯಾ ಉತ್ಪತ್ತಿಯಿಂದ ನಿಗದಿತ ಅವಧಿಗಿಂತ ಹೆಚ್ಚಿನ ಮಟ್ಟದಲ್ಲಿ ಹೂಳು ಜಲಾಶಯದಲ್ಲಿ ಶೇಖರಣೆಯಾಗುತ್ತದೆ’ ಎಂದು ಮಾಹಿತಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): ಇ</strong>ಲ್ಲಿನ ತುಂಗಭದ್ರಾ ಜಲಾಶಯದ ನೀರು ಈ ವರ್ಷವೂ ಹಸಿರು ಬಣ್ಣಕ್ಕೆ ತಿರುಗಿದೆ.</p>.<p>ಆದರೆ, ಈ ವರ್ಷ ಅವಧಿಗೂ ಮುನ್ನವೇ ಹಸಿರಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯದಿಂದ ಅಕ್ಟೋಬರ್ ವರೆಗೆ ಪ್ರತಿವರ್ಷ ಇಡೀ ಜಲಾಶಯದ ನೀರು ಹಸಿರಾಗುತ್ತದೆ.</p>.<p>ಸಯಾನೋ ಬ್ಯಾಕ್ಟೀರಿಯಾಗಳು (ಬ್ಲೂ ಗ್ರೀನ್ ಅಲ್ಗಿ) ಇಡೀ ಜಲಾಶಯವನ್ನು ಆಕ್ರಮಿಸಿಕೊಂಡು ನೀರನ್ನು ಹಸಿರಾಗಿಸುತ್ತವೆ. ಜಲಾನಯನ ಪ್ರದೇಶದ ಕೃಷಿ ಭೂಮಿಯಲ್ಲಿ ರಸಗೊಬ್ಬರಗಳ ಹೆಚ್ಚಿನ ಬಳಕೆ ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ನೇರವಾಗಿ ನದಿಗೆ ಹರಿದು ಬರುವುದರಿಂದ ಸಯಾನೋ ಬ್ಯಾಕ್ಟೀರಿಯಾ ಉತ್ಪತ್ತಿಯಾಗುತ್ತದೆ.</p>.<p>‘ರಸಗೊಬ್ಬರಗಳಲ್ಲಿನ ರಂಜಕ, ಗಂಧಕ, ಸಾರಜನಕ ಹಾಗೂ ಕೈಗಾರಿಕೆಗಳ ತ್ಯಾಜ್ಯದಿಂದ ಸಯಾನೋ ಬ್ಯಾಕ್ಟಿರಿಯಾ ಹುಟ್ಟುಕೊಳ್ಳುತ್ತದೆ. ಮೋಡ ಕವಿದ ವಾತಾವರಣದ ನಡುವೆ ಆಗಾಗ ಬಿರು ಬಿಸಿಲಿನಿಂದ ಅದರ ಉತ್ಪತ್ತಿ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗುತ್ತದೆ. ಈ ನೀರನ್ನು ಜನ, ಜಾನುವಾರು, ಪಕ್ಷಿಗಳು ನೇರವಾಗಿ ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ನೀರಿಗಿಳಿದರೆ ಚರ್ಮರೋಗವೂ ತಗುಲಬಹುದು’ ಎಂದು ಪರಿಸರ, ವನ್ಯಜೀವಿ ತಜ್ಞ ಸಮದ್ ಕೊಟ್ಟೂರು ತಿಳಿಸಿದರು.</p>.<p>‘ನೈಸರ್ಗಿಕವಾಗಿ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಸಯಾನೋ ಬ್ಯಾಕ್ಟೀರಿಯಾ ಉತ್ಪತ್ತಿಯಿಂದ ನಿಗದಿತ ಅವಧಿಗಿಂತ ಹೆಚ್ಚಿನ ಮಟ್ಟದಲ್ಲಿ ಹೂಳು ಜಲಾಶಯದಲ್ಲಿ ಶೇಖರಣೆಯಾಗುತ್ತದೆ’ ಎಂದು ಮಾಹಿತಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>