ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ಕ್ಯಾಮೆರಾಮ್ಯಾನ್ ಪಾಲ್ಗೊಂಡಿದ್ದರು. ಅಂದಿನ ಸಭೆಯಲ್ಲಿ ಭಾಗವಹಿಸಿದ್ದ ಪತ್ರಕರ್ತರು ಐದು ದಿನ ಸ್ವಯಂ ಕ್ವಾರಂಟೈನ್ಗೆ ಒಳಗಾಗಬೇಕು. ನಂತರ ಖುದ್ದಾಗಿ ಬಂದು ಗಂಟಲ ದ್ರವದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.