ಆಂಬುಲೆನ್ಸ್ನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಂಡಾ ನಿವಾಸಿ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕೆರೆ ತಾಂಡಾ ನಿವಾಸಿ ಮಂಗಳವಾರ ತಡರಾತ್ರಿ ಆಸ್ಪತ್ರೆಗೆ ಹೋಗುವಾಗ ಆಂಬುಲೆನ್ಸ್ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಲಕ್ಷ್ಮಿಬಾಯಿ ವೆಂಕಟೇಶ ನಾಯ್ಕ (22) ಎಂಬುವರಿಗೆ ಮಂಗಳವಾರ ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡಿತು. ತಕ್ಷಣವೇ ಅವರಿಗೆ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದುವಂತೆ ಅಲ್ಲಿದ್ದವರು ಸಲಹೆ ಮಾಡಿದರು. 108 ಆಂಬುಲೆನ್ಸ್ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ತಡರಾತ್ರಿ 1.25ಕ್ಕೆ ಹೆಣ್ಣು ಮಗು, 2.25ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಸೇರಿದಂತೆ ಮಕ್ಕಳು ಆರೋಗ್ಯವಾಗಿದ್ದಾರೆ.
ಆಂಬುಲೆನ್ಸ್ನಲ್ಲೇ ಹೆರಿಗೆಗೆ ನೆರವಾದ ಸಿಬ್ಬಂದಿ ಎಸ್.ಕೆ. ಸುರೇಶ ಮತ್ತು ಚಾಲಕ ಬಾಬು ಅವರ ಪಾದಕ್ಕೆ ನಮಸ್ಕರಿಸಿ ಲಕ್ಷ್ಮಿಬಾಯಿ ಇಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.