ಸಭೆ ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾ ಅಧ್ಯಕ್ಷೆ ಕೆ. ನಾಗರತ್ನಮ್ಮ, ‘ದೇವದಾಸಿಯರ ನಿಖರ ಸಂಖ್ಯೆ ಕಲೆ ಹಾಕಲು ಹೋದ ವರ್ಷ ಸರ್ಕಾರ ರಾಜ್ಯದಾದ್ಯಂತ ಸರ್ವೇ ನಡೆಸಿದೆ. ಆದರೆ, ಜಿಲ್ಲೆ ಸೇರಿದಂತೆ ಅನೇಕ ಕಡೆಗಳಲ್ಲಿ ದೇವದಾಸಿಯರ ಹೆಸರು ಕೈಬಿಟ್ಟು ಹೋಗಿವೆ. ಪುನಃ ಸರ್ವೇ ನಡೆಸಿ, ಅವರ ಹೆಸರು ಸೇರಿಸಬೇಕು. ಅಷ್ಟೇ ಅಲ್ಲ, ದೇವದಾಸಿಯರ ಮಕ್ಕಳ ಹೆಸರು ಕೂಡ ಅದರಲ್ಲಿ ಸೇರ್ಪಡೆ ಮಾಡಬೇಕು. ಅನೇಕ ದೇವದಾಸಿಯರು ಮರಣ ಹೊಂದಿದ್ದಾರೆ. ಮಕ್ಕಳ ಹೆಸರು ಸೇರಿಸುವುದರಿಂದ ಸರ್ಕಾರದ ಸೌಲಭ್ಯಗಳು ಅವರಿಗೆ ಸಿಗುತ್ತವೆ’ ಎಂದು ಅಭಿಪ್ರಾಯಪಟ್ಟರು.