ಹೊಸಪೇಟೆ: ಇಲ್ಲಿನ ವಿಜಯನಗರ ಕಾಲೇಜಿನ ಎನ್.ಸಿ.ಸಿ. ಕೆಡೆಟ್ಗಳಾದ ಎಂ.ಪಿ. ಪ್ರಭುಸ್ವಾಮಿ, ಕೆ. ವರುಣ್ ಕುಮಾರ ನವದೆಹಲಿಯಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ಗೆ ಆಯ್ಕೆಯಾಗಿದ್ದಾರೆ.
ಇದರ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಪದವಿ ಕಾಲೇಜಿನ ಪ್ರಾಚಾರ್ಯ ಪ್ರಭಯ್ಯ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ಸುಜಾತ, ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಟಿ.ಎಂ. ಪ್ರಭುಸ್ವಾಮಿ, ‘ಇದು ಕಾಲೇಜಿಗೆ ಹೆಮ್ಮೆ ತರುವ ವಿಷಯ’ ಎಂದು ಹೇಳಿದ್ದಾರೆ.